ಬೆಳಗಾವಿಯ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಮಾಡಿ ಶಾಸಕಿ ಡಾ ಅ‌ಂಜಲಿ ನಿಂಬಾಳಕರ್ ಆಗ್ರಹ…..

Suddi Sante Desk

ಬೆಳಗಾವಿ –

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಬೆಳಗಾವಿಯ ಸುವರ್ಣ ಸೌಧವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಕೆ ಮಾಡಿಕೊಳ್ಳುವಂತೆ ಕಾಂಗ್ರೆಸ್ ನ ಬೆಳಗಾವಿ ಖಾನಾ ಪುರ ಕ್ಷೇತ್ರದ ಶಾಸಕಿ ಡಾ ಅಂಜಲಿ ಹೇಮಂತ್ ನಿಂಬಾಳಕರ್ ಸರ್ಕಾರವನ್ನು ಒತ್ತಾಯಿಸಿ ಪತ್ರವನ್ನು ಬರೆದಿದ್ದಾರೆ.

ರಾಜ್ಯದಲ್ಲೂ ದಿನದಿಂದ ದಿನಕ್ಕೆ ಅದರಲ್ಲೂ ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಕೊರೋನಾ ಹೆಚ್ಚಿನ ಪ್ರಮಾಣದ ಕಂಡು ಬರುತ್ತಿದೆ.ದಿನದ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಾಗಿದ್ದು ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆಯುಂಟಾಗುತ್ತಿದೆ.

ಇಂತಹ ಸಂದರ್ಭದಲ್ಲಿ ಕಳೆದ ಎರಡು ವರ್ಷಗ ಳಿಂದ ಯಾವುದೇ ಅಧಿವೇಶ ನಗಳನ್ನು ನಡೆಸದೆ ವ್ಯರ್ಥವಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ವಹಣೆ ಮಾಡಲಾಗುತ್ತಿರುವ ಸುವರ್ಣಸೌಧ ವನ್ನು ಸದ್ಭಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಪತ್ರದಲ್ಲಿ ನಿಂಬಾಳಕರ್ ಹೇಳಿದ್ದಾರೆ.

ಸಾವಿರಾರು ರೋಗಿಗಳಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡುವಷ್ಟು ವಿಶಾಲವಾಗಿರುವ ಸುವರ್ಣಸೌಧ ದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರು ವ ಎಲ್ಲ ಸಲಕರಣೆಗಳನ್ನು ಅಳವಡಿಸಿ ಅಗತ್ಯ ವೈದ್ಯ ಕೀಯ ಸಿಬ್ಬಂದಿಯನ್ನು ನಿಯೋಜಿಸಿ ಉತ್ತರ ಕರ್ನಾ ಟಕ ಭಾಗದ ಮಂದಿಗೆ ವ್ಯವಸ್ಥೆ ಮಾಡಿಕೊಡಬೇಕೆಂ ದು ಸರ್ಕಾರವನ್ನು ಪತ್ರದ ಮೂಲಕ ಶಾಸಕಿ ಅವರು ಒತ್ತಾಯಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.