ರಾಜ್ಯದಲ್ಲಿಂದು ನಾಲ್ಕು ಶಿಕ್ಷಕರ ನಿಧನ – ಮೃತರಾದ ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರಿಂದ ಭಾವಪೂರ್ಣ ನಮನ

Suddi Sante Desk

ಬೆಂಗಳೂರು –

ಮಹಾಮಾರಿ ಕರೋನಾ ಗೆ ರಾಜ್ಯದಲ್ಲಿ ಮತ್ತೆ ನಾಲ್ಕು ಜನ ಶಿಕ್ಷಕರು ಮೃತರಾಗಿದ್ದಾರೆ.ಕೋವಿಡ್ ಸೋಂಕು ಕಾಣಿಸಿಕೊಂಡು ನಂತರ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯದ ಹಲವೆಡೆ ಶಿಕ್ಷಕರು ಕೋವಿಡ್ ನಿಂದಾಗಿ ಮೃತರಾಗಿದ್ದಾರೆ.ಇನ್ನೂ ಇಂದು ರಾಜ್ಯದ ಹಲವೆಡೆಗ ಳಲ್ಲಿ ನಿಧನರಾದ ಶಿಕ್ಷಕರ ಮಾಹಿತಿಯನ್ನು ನೋಡೊ ದಾದರೆ

ನರೇಂದ್ರ ಪಾಟೀಲ ಬೀದರನ ಬಿಇಓ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್ ಸೋಂಕು ಕಾನಿಸಿಕೊಂಡಿತ್ತು ಆಸ್ಪ ತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

ಜಿ ಹೆಚ್ ನಾಯಕ ದೈಹಿಕ ಶಿಕ್ಷಕರು ಸರ್ಕಾರಿ ಪ್ರೌಢ ಶಾಲೆ ಸಾಲವಾಡಗಿ ತಾಳಿಕೋಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೂ ಕೂಡಾ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು ಚಿಕಿತ್ಸೆ ಫಲಿಸದೇ ಇವರು ಕೂಡಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇನ್ನೂ ವಿಜಯಪುರದ ಕೋಲ್ಹಾರದಲ್ಲಿ ಸಂಗಮೇಶ್ವ ರ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಎಸ್ ಬಿ ಸಮಗಾರ ಇವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಇನ್ನೂ ಇತ್ತ ಸಿಂದಗಿ ಬಿಇಓ ಆಗಿದ್ದ ವಿ ವಾಯ್ ದೇವಗಾಂವಿ ಇವರ ಪತ್ನಿ ಬಸಮ್ಮ ಇವರು ಕೂಡಾ ಕೋವಿಡ್ ನಿಂದಾಗಿ ನಿಧರಾಗಿದ್ದಾರೆ.ಅಟ

ಇನ್ನೂ ಮೃತರಾದ ಇ ಇಬ್ಬರು ಶಿಕ್ಷಕರಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. ಹನಮಂತ ಬೂದಿಹಾ ಳ, ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾ ಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ. ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಅಶೋಕ ಸಜ್ಜನ, ಸೇರಿದಂತೆ ಹಲವರು ಸಂತಾಪವನ್ನು ಸೂಚಿ ಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಘೋಷಣೆ ಮಾಡಿ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ‌.

 

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.