ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಗಾರರ ಬಂಧನ – ಕೇಶ್ವಾಪೂರ ಪೊಲೀಸರ ಕಾರ್ಯಾಚರಣೆ

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿ-ಧಾರವಾಡ ಶಹರದಲ್ಲಿ ಗಾಂಜಾ ಮಾರಾಟಾ ಮಾಡುತ್ತಿದ್ದ ಜಾಲವನ್ನು ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸರು ಪತ್ತೆ ಹಚ್ಚಿದ್ದಾರೆ‌.ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ನಡೆದ ಕಾರ್ಯಾಚರಣೆ ಯಲ್ಲಿ ಸಬ್ ಇನ್ಸ್ಪೆಕ್ಟರ್ ಬಾಬಾ ಎಮ್.ಮತ್ತು ಸಿಬ್ಬಂದಿ ಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅನಧೀಕೃತವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇಧಿಸಿದ್ದಾರೆ.

ಸ್ಯಾಮುವೆಲ್ ತಂದೆ ಏಸು ಬಿಲ್ಲಾ ಸಾ: ಹುಬ್ಬಳ್ಳಿ.ಮತ್ತು ನವೀನಕುಮಾರ ತಂದೆ ಪುರಷೋತ್ತಮ ಏಸುಮಾಲ ಸಾ: ಹುಬ್ಬಳ್ಳಿ ಬಂಧಿತರಾಗಿದ್ದಾರೆ.250-ಗ್ರಾಂ. ಗಾಂಜಾ, 25-ಸಣ್ಣ ಸಣ್ಣ ಪ್ಲಾಸ್ಟಿಕ್ ಪ್ಯಾಕೆಟುಗಳು ಹಾಗೂ ನಗದು ಹಣ 290/-ಇವುಗಳನ್ನು ವಶಪಡಿಸಿಕೊಂಡು ಸದರಿ ಆರೋಪಿತರ ಮೇಲೆ ಕಾನೂನು ಕ್ರಮ ಜರುಗಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಸದರಿ ಆರೋಪಿತರು ನ್ಯಾಯಾಂಗ ಬಂಧನದಲ್ಲಿರುತ್ತಾರೆ. ಈ ಪ್ರಕರಣವನ್ನು ಬೇಧಿಸಿದ ಹುಬ್ಬಳ್ಳಿ ಕೇಶ್ವಾಪೂರ ಠಾಣೆಯ ಸಬ್ ಇನ್ಸಪೆಕ್ಟರ್ (ಕಾವಸು) ಶ್ರೀ ಬಾಬಾ ಎಮ್ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು, ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.