ಸಿಡಿ ಲೇಡಿ ನಾಳೆ ನ್ಯಾಯಾಲಯಕ್ಕೆ ಹಾಜರು – ಯುವತಿಯ ಪರ ನ್ಯಾಯವಾದಿ ಜಗದೀಶ್ ಹೇಳಿಕೆ

Suddi Sante Desk

ಬೆಂಗಳೂರು –

ಸಿ.ಡಿ.ಯಲ್ಲಿ ಕಾಣಿಸಿಕೊಂಡಿರುವ ಯುವತಿ ಪ್ರಕರಣ ಸಂಬಂಧ ಹೇಳಿಕೆ ನೀಡಲು ನ್ಯಾಯಾಲ ಯದ ಮುಂದೆ ಹಾಜರಾಗಲಿದ್ದಾರೆ ಎಂದು ವಕೀಲ ಕೆ.ಎನ್ ಜಗದೀಶ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾ ಡಿದ ಅವರು ಈ ಒಂದು ವಿಷಯವನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ

ಈ ಬಗ್ಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿರುವ ಅವರು, ಯುವತಿ ನೀಡಿದ ದೂರನ್ನು ಆಧರಿಸಿ ರಮೇಶ್‌ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಸಿ.ಡಿ. ಪ್ರಕರಣದಲ್ಲಿ ಅತ್ಯಾಚಾರ ಪ್ರಕರಣ ಮತ್ತು ಸುಲಿಗೆ ಪ್ರಕರಣ ದಾಖಲಾಗಿವೆ. ಎರಡೂ ಪ್ರಕರಣಗಳನ್ನು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.ಅಲ್ಲದೇ ಇಲಾಖೆಯ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು

ಇವು ಗಂಭೀರ ಸ್ವರೂಪದ ದೂರುಗಳಾಗಿದ್ದು, ಪೊಲೀಸರು ನ್ಯಾಯಯುತವಾಗಿ ತನಿಖೆ ನಡೆಸುವ ಬಗ್ಗೆ ಸಂಶಗಳಿವೆ ಎಂದಿದ್ದಾರೆ.ಫೇಸ್‌ಬುಕ್‌ ಲೈವ್‌ ನಲ್ಲಿ ಜಗದೀಶ್‌ ಜೊತೆ ಮಂಜುನಾಥ್ ಮಾತನಾಡಿ ಪ್ರಕ್ರಿಯೆ ನಡೆಯಲಿದ್ದು ಯುವತಿಯ ಹೇಳಿಕೆಗಳು ದಾಖಲಾಗಲಿವೆ ಎಂದು ಹೇಳಿದ್ದು ನಾಳೆ ಏನಾಗಲಿದೆ ಎಂಬುದು ಕುತೂಹಲ ಕೆರಳಿಸಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.