ಬಸ್ ಕಂಡಕ್ಟರ್ ಆತ್ಮಹತ್ಯೆ – ಸಾವಿನ ಹಿಂದೆ ಹುಟ್ಟುಕೊಂಡಿವೆ ಹಲವು ಅನುಮಾನಗಳು – ಡೇತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮೌಲಾಸಾಬ್

Suddi Sante Desk

ಹುಬ್ಬಳ್ಳಿ –

ಸಾರಿಗೆ ಬಸ್ ನಿರ್ವಾಹಕ (ಕಂಡಕ್ಟರ್) ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬಂಡಿವಾಡ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಹೊರ ವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೌಲಾಸಾಬ್ ದಾವಲ್ ಸಾಬ್ ಮಿಶ್ರಿಕೋಟಿ ಆತ್ಮ ಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಾರಿಗೆ ನೌಕರ ನಾಗಿರುವ ಮೌಲಾಸಾಬ್ ಕಳೆದ ಹಲವು ದಿನಗಳಿಂ ದ ಕರ್ತವ್ಯದಿಂದ ಅಮಾನತುಗೊಂಡಿದ್ದು ಬೈಕ್ ಕಳ್ಳತನ ಪ್ರಕರಣದ ಆರೋಪದಲ್ಲಿ ಮನ ನೊಂದು ಕೊಂಡಿರುವ ಮೌಲಾಸಾಬ್ ಗ್ರಾಮದ ಜಮೀನಿನಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನೂ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೇತ್ ನೋಟ್ ಬರೆದು ಸಾವಿಗೆ ಶರಣಾಗಿದ್ದು ಸುದ್ದಿ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗ ಮಿಸಿ ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.