ಧಾರವಾಡದಲ್ಲಿ ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಘಟಕಕ್ಕೆ ಜಿಲ್ಲಾಧಿಕಾರಿಗಳ ಭೇಟಿ – ವೈದ್ಯ ಕೀಯ ಚಿಕಿತ್ಸೆಗೆ ಮಾತ್ರ ಆಕ್ಸಿಜನ್ ಪೂರೈಕೆಗೆ ಸೂಚನೆ…..

Suddi Sante Desk

ಧಾರವಾಡ –

ಧಾರವಾಡದ ಸತ್ತೂರಿನಲ್ಲಿರುವ ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಪ್ರೈವೇಟ್ ಲಿಮಿಟೆಡ್ ಆವರಣಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂ ರಾಮ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದರು

ಜಿಲ್ಲೆಯಲ್ಲಿ ಕೈಗಾರಿಕಾ ಘಟಕಗಳಿಗೆ ಆಕ್ಸಿಜನ್ ಪೂರೈಸುವ ಘಟಕಗಳು ಮುಂದಿನ ಆದೇಶದವ ರೆಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಆಕ್ಸಿಜನ್ ಪೂರೈಸಬೇಕು.ಪ್ರತಿದಿನ ನಮ್ಮ ಜಿಲ್ಲೆಗೆ ಅಗತ್ಯವಿರು ವ ಆಕ್ಸಿಜನ್ ಸರಬರಾಜಿನ ಖಚಿತ ಸಂಗ್ರಹ ಹೊಂದಿ ರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಕರ್ನಾಟಕ ಇಂಡಸ್ಟ್ರಿಯಲ್ ಗ್ಯಾಸ್ ಸಂಸ್ಥೆಯ ರವೀಂದ್ರ ಓದುಗೌಡ್ರ ಮಾತನಾಡಿ,ಸರ್ಕಾರ ಮತ್ತು ಜಿಲ್ಲಾಡಳಿತದ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.ವೈದ್ಯಕೀಯ ಚಿಕಿತ್ಸೆಗೆ ಮಾತ್ರ ಆಕ್ಸಿಜನ್ ಪೂರೈಸಲಾಗುವುದು ಎಂದರು.

ಹಿರಿಯ ಕೆ.ಎ.ಎಸ್.ಅಧಿಕಾರಿ ಮಹ್ಮದ್ ಜುಬೇರ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಅಪ್ಪಯ್ಯ ಸ್ವಾಮಿ ನಾಲತ್ವಾಡಮಠ,ಬಿ.ಶಂಕರಪ್ಪ,ತಹಸೀಲ್ದಾ ರರಾದ ಶಶಿಧರ ಮಾಡ್ಯಾಳ,ಡಾ.ಸಂತೋಷಕುಮಾ ರ ಬಿರಾದಾರ,ಸಹಾಯಕ ಔಷಧ ನಿಯಂತ್ರಕ ಕೆ. ಎಸ್.ಮಲ್ಲಿಕಾರ್ಜುನ ಮತ್ತಿತರರು ಈ ಒಂದು ಸಮಯದಲ್ಲಿ ಇದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.