ಹಿರಿಯ ಕನ್ನಡ ಪ್ರಾಧ್ಯಾಪಕ ಇನ್ನಿಲ್ಲ ಆಸ್ಪತ್ರೆಯಲ್ಲಿ ನಿಧನರಾದ ಡಾ ಬುದ್ದೇಶ್…..

Suddi Sante Desk

ಕಲಬುರ್ಗಿ –

ನಾಡಿನ ಹಿರಿಯ ಹೆಸರಾಂತ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ ನಿಧನರಾಗಿದ್ದಾರೆ‌. ಕಲ ಬುರ್ಗಿಯ ಕರುಣೇಶ್ವರ ನಗರದ ನಿವಾಸಿಯಾಗಿರು ವ ಇವರು ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿದ್ದಾರೆ‌. ಡಾ. ಬುದ್ಧೇಶ್ ಶಂಕರ ಸಿಂಗೆ (53)ಸೊಲ್ಲಾಪುರದ ಆಸ್ಪತ್ರೆ ಯಲ್ಲಿ ಗುರುವಾರ ನಿಧನರಾದರು.

ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆ ಯ ನಂತರ ಗುಣಮುಖರಾಗಿ ಮರಳಿದ್ದರು ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯ ರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ ಪುತ್ರಿ ಇದ್ದಾರೆ. ಅವರ ಸ್ವಂತ ಊರಾದ ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಭಾವಪೂರ್ಣ ನಮನ ಸಲ್ಲಿಸಿದ್ದಾರೆ ಹನುಮಂತ ಬೂದಿಹಾಳ,ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ ಸಜ್ಜನ .ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾ ರ್ಜುನ ಉಪ್ಪಿನ್ .ಗೌರವಾಧ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಕೋಶಾಧ್ಯಕ್ಷರಾದ ಎಸ್ ಎಫ್ ಪಾಟೀಲ್ ಕಾರ್ಯಾಧ್ಯಕ್ಷರಾದ ಶರಣಪ್ಪ ಗೌಡ ಆರ್ ಕೆ ಮಹಾಪೋಷಕರಾದ ಪವಾಡಪ್ಪ ಕಾಂಬ್ಳೆ ಉಪಾ ಧ್ಯಕ್ಷರುಗಳಾದ ಗೋವಿಂದ ಜುಜಾರೆ ಹನುಮಂತಪ್ಪ ಮೇಟಿ. ಡಿ.ಎಸ್.ಭಜಂತ್ರಿ.ಕುಕನೂರ.ರಾಮಪ್ಪ ಹಂಡಿ .ಎಮ್ ಆಯ್ ಮುನವಳ್ಳಿ ಮಹ್ಮದ್ ರಫಿ ಡಿ ಟಿ ಬಂಡಿವಡ್ಡರ ರಾಜ್ಯ ಪದಾಧಿಕಾರಿಗಳಾದ ಶರಣಬಸವ ಬನ್ನಿಗೋಳ.ಎಂ.ವಿ ಕುಸುಮಾ. ರಾಜಶ್ರೀ ಪ್ರಭಾಕರ್ ಜಿ ಟಿ ಲಕ್ಷ್ಮೀದೇವಮ್ಮ ಕಲ್ಪನಾ ಚಂದನಕರ. ರವಿ ಬಂಗೆನ್ನವರ ಶಿವರಡ್ಡಿ, ನಾರಾಯ ಣಸ್ವಾಮಿ ಆರ್ ಚಿಂತಾಮಣಿ, ಚಂದ್ರಶೇಖರ್ ಶೆಟ್ರು, ಅಶೋಕ.ಬಿಸೆರೊಟ್ಟಿ ನಾಗರಾಜ್ ಆತಡಕರ ನಾಗರಾಜ್ ಕೆ .ರೇಖಾ ದೇವಿ ದೇವಿಕಾ ಕಮ್ಮಾರ  ಮುಂತಾದವರು ಸಂತಾಪ ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.