ಧಾರವಾಡದಲ್ಲಿ ಕಿರಾಣಿ ಅಂಗಡಿಗೆ ಬೆಂಕಿ – ಬೆಂಕಿ ನಂದಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತಪ್ಪಿತು ದೊಡ್ಡ ಅವಘಡ…..

Suddi Sante Desk

ಧಾರವಾಡ –

ಕಿರಾಣಿ ಅಂಗಡಿಗೆ ಬೆಂಕಿ ಬಿದ್ದ ಘಟನೆ ಧಾರವಾಡದ ಸೂಪರ್ ಮಾರ್ಕೆಟ್ ನಲ್ಲಿ ನಡೆದಿದೆ.ನಗರದ ಟಿಪ್ಪು ಸರ್ಕಲ್ ಬಳಿ ಇರುವ ಸೂಪರ್ ಮಾರ್ಕೆಟ್ ನಲ್ಲಿ ಈ ಒಂದು ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿದೆ ನೋಡು ನೋಡುತ್ತಲೇ ಜೋರಾಗಿ ಉರಿಯುತ್ತಾ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ

ಟಿಪ್ಪು ಸರ್ಕಲ್ ಸೂಪರ್ ಮಾರ್ಕೆಟ್ ಬಳಿ ಬೆಳಗಿನ ಜಾವ ಕಿರಾಣಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಬೆಂಕಿ ಕೆನ್ನಾಲಿಗೆ ಸ್ವಲ್ಪಮಟ್ಟಿಗೆ ಅಂಗಡಿ ಸುಟ್ಟಿದ್ದು ಇನ್ನೂ ತಕ್ಷಣವೇ ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು

ಇನ್ನೂ ಈ ಒಂದು ವಿಚಾರವನ್ನು ಅಂಗಡಿಯ ಮಾಲೀಕರಿಗೆ ತಿಳಿಸಿದ್ದರಿಂದ ಕೂಡಲೇ ಸ್ಥಳಕ್ಕೆ ಆಗಮಿಸಿ ಬಾಗಿಲು ತೆರೆದರು ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ

ಅಂಗಡಿಯು ಅಲ್ಪ ಸ್ವಲ್ಪ ಮಟ್ಟಿಗೆ ಬೆಂಕಿಗೆ ಸುಟ್ಟಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.