ಕೊರೋನಾ ಸೊಂಕಿನ ಭೀತಿಗೆ ಭಯಗೊಂಡು ಆತ್ಮಹತ್ಯೆ ಮಾಡಿ ಕೊಂಡ ಯುವಕ…..

Suddi Sante Desk

ಉಡುಪಿ –

ಕೊರೋನಾ ಸೊಂಕಿನ ಭೀತಿಯಿಂದ ಭಯಗೊಂಡ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಯಲ್ಲಿ ನಡೆದಿದೆ.ಕೆಳಾರ್ಕಳ ಬೆಟ್ಟು ನಿವಾಸಿ ಪ್ರಸನ್ನ ಡಿ ಅಲ್ಮೇಡಾ ( 26) ಸಾವಿಗೀಡಾದ ಯುವಕ ನಾಗಿದ್ದಾನೆ‌‌‌.ಇನ್ನೂ ಅತ್ತ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿರುವ ಅಣ್ಣನ ಕುರಿತು ಚಿಂತೆ ಮಾಡುತ್ತಾ ಖಿನ್ನತೆಗೆ ಒಳಗಾಗಿದ್ದರು.

ಕಳೆದ ಒಂದು ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಸನ್ನ.ಕೊರೋನಾದಿಂದ ಬಳಲುತ್ತಿ ರುವ ಅಣ್ಣನ ಬಗ್ಗೆ ಆತಂಕದಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ‌ ಯುವಕ

ಮಲ್ಪೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ದೂರನ್ನು ದಾಖಲು ಮಾಡಿಕೊಂಡ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.