ಕೋವಿಡ್ ಕಾರ್ಯಕ್ಕೆ ನಿಯೋಜನೆ ಗೊಂಡ ಪ್ರಾಥಮಿಕ ಶಾಲಾ ಶಿಕ್ಷಕ ರಿಗೆ ಸೂಕ್ತವಾದ ಸೌಲಭ್ಯ ಕಲ್ಪಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯ

Suddi Sante Desk

ಬೆಂಗಳೂರು –

ಸಧ್ಯ ರಾಜ್ಯದಲ್ಲಿ ತುಂಬಾ ತುಂಬಾ ಹೆಚ್ಚಿನ ಪ್ರಮಾಣ ದಲ್ಲಿ ಸಂಕಷ್ಟದ ಪರಸ್ಥಿತಿ ನಿರ್ಮಾಣವಾಗಿದೆ.ಇಂಥ ಹ ಪರಸ್ಥಿತಿಯಲ್ಲಿ ಇದನ್ನು ನಿಯಂತ್ರಣ ಮಾಡಲು ವಿವಿಧ ಇಲಾಖೆಯ ಸಿಬ್ಬಂದಿಗಳೊಂದಿಗೆ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಕರ್ತವ್ಯಕ್ಕೆ ನೇಮಕ ಮಾಡಿ ದ ರಾಜ್ಯದ ಎಲ್ಲಾ ಶಿಕ್ಷಕರಿಗೆ ಸೂಕ್ತವಾದ ಸೌಲಭ್ಯ ಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿ ಕ ಶಾಲಾ ಶಿಕ್ಷಕರ ಸಂಘ ಒತ್ತಾಯ ಮಾಡಿದೆ.

ಈ ಒಂದು ವಿಚಾರ ಕುರಿತಿ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದ ರ್ಶಿ ಚಂದ್ರಶೇಖರ ನುಗ್ಗಲಿ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಒತ್ತಾಯವನ್ನು ಮಾಡಿದ್ದಾರೆ.

ಅಧ್ಯಕ್ಷರು

ಈ ಕುರಿತಂತೆ ಪತ್ರವೊಂದನ್ನು ಬರೆದಿದ್ದು ಪ್ರಮುಖ ವಾಗಿ ಕೋವಿಡ್ ಕರ್ತವ್ಯಕ್ಕೆ ನೇಮಕಗೊಂಡಿರುವ ರಾಜ್ಯದ ಶಿಕ್ಷಕರಿಗೆ ಸೂಕ್ತ ಚಿಕಿತ್ಸೆಯನ್ನು ವ್ಯವಸ್ಥೆ ಮಾಡಿ ಕೊಡಬೇಕು.ಉಚಿತ ಲಸಿಕೆಯ ನೀಡುವಂತ ಹ ವ್ಯವಸ್ಥೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ

ಪ್ರಧಾನ ಕಾರ್ಯದರ್ಶಿ

ಹಾಗೇ ಪ್ರಮುಖವಾಗಿ 55 ವಯಸ್ಸಿನ ವಿವಿಧ ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿರುವ ಪುರುಷ ಮತ್ತು ಮಹಿಳೆಯರು ಹಾಗೇ ಗರ್ಭಿಣಿ ಮಹಿಳೆಯ ರು ಚಿಕ್ಕ ಚಿಕ್ಕ ಮಕ್ಕಳಿರುವ ಮಹಿಳಾ ನೌಕರರನ್ನು ಕರ್ತವ್ಯದಿಂದ ಕೈಬಿಡುವಂತೆ ಒತ್ತಾಯ ಮಾಡಿದ್ದಾರೆ

ಈ ಕೂಡಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಕುರಿತಂತೆ ಸೂಕ್ತವಾದ ನಿರ್ದೇಶನವನ್ನು ನೀಡುವಂ ತೆ ಒತ್ತಾಯ ಮಾಡಿದ್ದಾರೆ ಇದರೊಂದಿಗೆ ಸಂಘವು ಶಿಕ್ಷಕರ ಹಿತಕ್ಕೆ ಮುಂದಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.