ಒಂದೇ ದಿನ ಜಿಲ್ಲೆಯಲ್ಲಿ ಕೋವಿಡ್ ಗೆ ಮೂವರು ಶಿಕ್ಷಕರು ಸಾವು – ಮುಗಿಲು ಮುಟ್ಟಿದೆ ಶಿಕ್ಷಕರ ಆಕ್ರಂದನ…..

Suddi Sante Desk

ತುಮಕೂರು –

ಮಹಾಮಾರಿ ಕರೋನಾಗೆ ರಾಜ್ಯದಲ್ಲಿ ಶಿಕ್ಷಕರ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಇನ್ನೂ ಈ ಒಂದು ಕೋವಿಡ್ ಗೆ ಒಂದೇ ದಿನ ಮೂವರು ಶಿಕ್ಷಕರು ಕೋವಿಡ್ ಗೆ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ

ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉಜ್ಜನಿ ಪ್ರೌಢಶಾಲೆ ಯ ಶಿಕ್ಷಕ ಶಿವರಾಮೇಗೌಡ ಅವರಿಗೆ ಕೋವಿಡ್ ಸೊಂಕು ಕಾಣಿಸಿಕೊಂಡಿತ್ತು ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ‌

ಕುಣಿಗಲ್ ತಾ.ಮಲ್ಲಿಪಾಳ್ಯ ಶಾಲಾ ಶಿಕ್ಷಕರಾದ ಪರ ಮೇಶ್ವರಾಚಾರ್ ಅವರಿಗೆ ಸೋಂಕು ಕಾಣಿಸಿಕೊಂ ಡಿತ್ತು ನಂತರ ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖ ಲಿಸಲಾಗಿತ್ತು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿ ಗೀಡಾಗಿದ್ದಾರೆ‌

ತುರಗನೂರು ಶಾಲೆಯ ಶಿಕ್ಷಕ ಕೃಷ್ಣಪ್ಪನವರ ಕೂಡಾ ಕೋವಿಡ್ ನಿಂದಾಗಿ ಸಾವಿಗೀಡಾಗಿದ್ದಾರೆ‌ ‌ಅಗಲಿದ ಇವರ ಆತ್ಮಕ್ಕೆ ಶಾಂತಿ ಸಿಗಲಿ ದೇವರು ಇವರ ಕುಟುಂಬ ವರ್ಗದವರಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಶಿಕ್ಷಕರು ಪ್ರಾರ್ಥನೆ ಸಲ್ಲಿಸಿದ್ದಾರೆ

ಇನ್ನೂ ಮೃತರಾದ ಶಿಕ್ಷಕನ ಅಗಲಿಕೆಗೆ ರಾಜ್ಯಾಧ್ಯಂತ ಶಿಕ್ಷಕರು ಸಂಘಟನೆಯ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರಾಜ್ಯ ಗ್ರಾಮೀಣ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಮತ್ತು ನಾಡಿನ ಶಿಕ್ಷಕ ಬಂಧುಗಳಾದ ಎಲ್ ಐ ಲಕ್ಕಮ್ಮನವರ,ಶರಣಬಸ ವ ಬನ್ನಿಗೊಳ,ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ,ರಾಜುಸಿಂಗ್ ಹಲವಾಯಿ, ಚಂದ್ರಶೇ ಖರ ಶೆಟ್ರು,ನಾರಾಯಣಸ್ವಾಮಿ,ಕೆ ಎಮ್ ಮುನವ ಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ಅಶೋಕ ಸಜ್ಜನ, ರುಸ್ತಂ ಕನವಾಡೆ,ಬಿ ವಿ ಪ್ರೇಮಾ ವತಿ, ಕೀರ್ತಿವತಿ ವಿ ಎನ್, ಜೆ ಟಿ, ಮಂಜುಳಾ, ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು,ನಾಗವೇಣಿ,ಇಂದಿರಾ.ಮುಕಾಂಬಿಕಾ ಭಟ್.ನಾಗರತ್ನ,ಲಕ್ಷ್ಮೀದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವರ,ಬಿ ವಿ ಅಂಗಡಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.

ಇತ್ತ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ ಕೂಡಾ ಸಂತಾಪವನ್ನು ಸೂಚಿಸಿದೆ. ಸಂಘದ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀ ಲ.ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹಾಗೇ ಸುರೇಶ ಶೇಡಶ್ಯಾಳ,ಬಿ ಟಿ ಗೌಡರ, ಜುಬೇರ ಕೆರೂರ,ಜೆ ಎಸ್ ಬಾಲೇಸೂರ,ಹೆಚ್ ಬಿ ಕೊನಾಡಿ ಸೇರಿದಂತೆ ಸಂಘದ ಸರ್ವ ಸದಸ್ಯರು ಒಂದೇ ದಿನ ಮೃತರಾದ ಮೂವರು ಶಿಕ್ಷಕರಿಗೆ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.