ಕೋವಿಡ್ ಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯ ದರ್ಶಿ ಶಿಕ್ಷಕ ಬಲಿ – ಮೃತ ಆ ಶಿಕ್ಷಕ ನಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಂತಾಪ

Suddi Sante Desk

ಬೆಂಗಳೂರು –

ಕೋವಿಡ್ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊರ್ವ ಉತ್ಸಾಹಿ ಶಿಕ್ಷಕರೊಬ್ಬರು ಸಾವಿಗೀಡಾಗಿದ್ದಾರೆ. ಹೌದು ಬೆಂಗಳೂರಿನ ಉತ್ತರ ವಲಯ 3 ರ ಪ್ರಾಥ ಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದ ರ್ಶಿಗಳಾದ ಚಂದ್ರಶೇಖರಯ್ಯ ಅವರು ಕರೋನಾಗೆ ಬಲಿಯಾಗಿದ್ದಾರೆ.ಶಿಕ್ಷಕರ ಸೇವೆಯನ್ನು ಪ್ರಾಮಾಣಿಕ ವಾಗಿ ಮಾಡುವಲ್ಲಿ ಹೆಸರಾಗಿದ್ದ ಇವರಿಗೆ ಸೋಂಕು ಕಾಣಿಸಿಕೊಂಡಿತ್ತು ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದ ಇವರ ನಿಧನಕ್ಕೆ ನಾಡಿನ ಶಿಕ್ಷಕರು ಸಂತಾಪವನ್ನು ಸೂಚಿಸಿದ್ದಾರೆ. ಹೌದು

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವೂ ಕೂಡಾ ಮೃತರಾದ ಚಂದ್ರಶೇಖರಯ್ಯ ಅವರಿಗೆ ತೀವ್ರವಾದ ಸಂತಾಪವನ್ನು ಸೂಚಿಸಿದೆ.ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್, ಚಂದ್ರಶೇಖರ್ ನುಗ್ಗಲಿ,ಬೆಂಗಳೂರಿನ ಉತ್ತರ ಜಿಲ್ಲಾ ಅಧ್ಯಕ್ಷ ಗಿರೀಶ್,ತಾಲ್ಲೂಕು ಅಧ್ಯಕ್ಷ ಚನ್ನೇಗೌಡ ಸೇರಿದಂತೆ ಸಂಘದ ಸರ್ವ ಸದಸ್ಯರು ಮೃತರಾದ ಶಿಕ್ಷಕರಿಗೆ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ ಇದರೊಂ ದಿಗೆ ಕಾಳಜಿವ ಹಿಸಿಕೊಳ್ಳುವಂತೆ ವಿನಂತಿಸಿ ಮೃತ ಶಿಕ್ಷಕರ ಕುಟುಂಬಕ್ಕೆ ಕೂಡಲೇ ಸೂಕ್ತವಾದ ಪರಿಹಾ ರವನ್ನು ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.