‘ಶಿಕ್ಷಕ ಸಂಯೋಜಕಿ’ ಕೋವಿಡ್ ನಿಂದ ಸಾವು – ಎಚ್ಚೆತ್ತುಕೊಳ್ಳದ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ…..

Suddi Sante Desk

ಬೆಂಗಳೂರು –

ಮಹಾಮಾರಿ ಕರೋನ ಗೆ ರಾಜ್ಯದಲ್ಲಿ ಸಾವು ನೋವುಗಳ ಸಂಖ್ಯೆ ಮುಂದುವರಿದಿದೆ.ರಾಜ್ಯದಲ್ಲಿ ಮತ್ತೊರ್ವ ಶಿಕ್ಷಣ ಇಲಾಖೆಯ ಕನ್ನಡ ವಿಷಯದ ಇನ್ಸ್ಪೆಕ್ಟರ್ ರೊಬ್ಬರು ಕೋವಿಡ್ ನಿಂದಾಗಿ ಸಾವಿಗೀ ಡಾಗಿದ್ದಾರೆ‌.ಹೌದು ಬೆಂಗಳೂರಿನ ಗ್ರಾಮೀಣ ಪ್ರದೇ ಶದ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಕನ್ನಡ ವಿಷಯದ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ಮಾಡುತ್ತಿದ್ದ ಸೌಭಾಗ್ಯ ಅವರು ಕೋವಿಡ್ ನಿಂದಾಗಿ ಸಾವಿಗೀಡಾ ದವರಾಗಿದ್ದಾರೆ‌.

ಹೌದು DIET ನಲ್ಲಿ ಕನ್ನಡ ಭಾಷೆಯ ಇನ್ಸ್ಪೆಕ್ಟರ್ ಆಗಿದ್ದ ಸೌಭಾಗ್ಯ ಅವರಿಗೆ ಕಳೆದ ವಾರವಷ್ಟೇ ಸೋಂಕು ಕಾಣಿಕೊಂಡಿತ್ತು ಬೆಂಗಳೂರಿನಲ್ಲಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ‌

ಇನ್ನೂ ಮೃತರಾದ ಇವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜುಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ,ಬಿ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು,ಕೆ ನಾಗರಾಜ ಬೋಪಾ ವೆಂಕಟೇಶ, ಡಿ ಎಸ್ ಭಜಂತ್ರಿ ನಾಗವೇಣಿ ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀದೇ ವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣನವ ರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.