ದ್ವಿತೀಯ ಪಿಯು ಪರೀಕ್ಷೆ ಮುಂದೂ ಡಿಕೆ – ಪ್ರಥಮ ಪಿಯು ವಿದ್ಯಾರ್ಥಿ ಗಳ ತೇರ್ಗಡೆ ಸುರೇಶ್ ಕುಮಾರ್ ಮಾಹಿತಿ…..

Suddi Sante Desk

ಬೆಂಗಳೂರು –

ಮಹಾಮಾರಿ ಕೋವಿಡ್ ಹಿನ್ನೆಲೆಯಲ್ಲಿ ಮೇ 24 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಹಾಗೇ ಮುಂದಿ ನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸ ಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು. ಬೆಂಗ ಳೂರಿನಲ್ಲಿ ಮಾತನಾಡಿದ ಅವರು ಈ ಒಂದು ಮಾಹಿತಿಯನ್ನು ನೀಡಿದರು.

ಇಂದು ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.ಈಗಾಗಲೇ ಪರೀಕ್ಷೆ ಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಯಾವುದೇ ಕಾರಣ ಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾ ಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದರು

ಇನ್ನೂ ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸ ಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀ ಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾ ಗಿದೆ.ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರ ವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು

ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿ ರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು  ಸೂಚಿಸಲಾಗಿದೆ.ವಿದ್ಯಾರ್ಥಿ ಗಳೊಂದಿಗೆ ನಿರಂತರ ಸಂಪರ್ಕ ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸು ವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ  ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳ ನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್  ತಿಳಿಸಿದರು.

ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪರೀಕ್ಷೆ ಮುಂದೂ ಡುವ ನಿರ್ಧಾರಕ್ಕೆ ಬರಲಾಗಿದೆ ಎಂದರು‌ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.