ಬಳ್ಳಾರಿ –
ಮಹಾಮಾರಿ ಕೊರೊನಾ ಹಿನ್ನಲೆಯಲ್ಲಿ ಐತಿಹಾಸಿಕ ಶ್ರೀ ಮೈಲಾರ ಜಾತ್ರೆಯನ್ನು ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಹೌದು. ಫೆ 19 ರಿಂದ ಮಾ 2 ರವರೆಗೆ ನಡೆಯಬೇಕಿದ್ದ ಜಾತ್ರೋತ್ಸವನ್ನು ರದ್ದು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಡಗಲಿ ತಾಲೂಕಿನ ಧಾರ್ಮಿಕ ಕ್ಷೇತ್ರ ಮೈಲಾರ ಗ್ರಾಮದ ಶ್ರೀ ಏಳುಕೋಟಿ ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆ ರಾಜ್ಯದಲ್ಲಿ ಬಹಳ ಪ್ರಸಿದ್ದಿ ಪಡೆದಿದೆ.

ಈ ಜಾತ್ರೆಯನ್ನು ವೀಕ್ಷಿಸಲು ರಾಜ್ಯದ ಹಲವು ಭಾಗದಿಂದ ಭಕ್ತರು ಬರುತ್ತಾರೆ. ವಿಶೇಷ ಅಂದರೆ ಸುಮಾರು 15 ಅಡಿ ಮರದ ಬಿಲ್ಲನ್ನು ಏರಿ ಕಾರ್ಣಿಕ ನುಡಿಯುವ ಗೊರವಯ್ಯ ನ್ನು ಲಕ್ಷಾಂತರ ಮಂದಿ ವೀಕ್ಷಿಸಿ ಭವಿಷ್ಯವನ್ನು ಆಲಿಸುತ್ತಿದ್ದರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 1 ರಂದು ಕಾರ್ಣಿಕೋತ್ಸವ ನಡೆಯಬೇಕಿತ್ತು.ಆದರೆ ಕೊರೊನಾ ಸೋಂಕಿನ ಹಿನ್ನೆಲೆ ಫೆ.19 ರಿಂದ ಮಾ 2 ರವರೆಗೂ ನಡೆಯಬೇಕಿದ್ದ ಜಾತ್ರೋತ್ಸವನ್ನು ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಿ ಪಾಟೀಲ್ ರದ್ದು ಮಾಡಿ ಜಿಲ್ಲಾಡಳಿತದ ಆದೇಶ ಹೊರಡಿಸಿದ್ದಾರೆ.