ಮೊದಲ ಭೇಟಿಯಲ್ಲಿಯೇ ತವರು ಕ್ಷೇತ್ರಕ್ಕೆ ಮಹತ್ವದ ಬೇಡಿಕೆ ಇಟ್ಟ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌…..

Suddi Sante Desk

ಬೆಂಗಳೂರು –

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿ ಇದ್ದಾರೆ. ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಕೈಗೊಂಡ ಈ ಒಂದು ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್‍ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರಿಗೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಅಭಿವೃದ್ಧಿಗೆ ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.ಇದರೊಂದಿಗೆ ಮೊದಲ ಭೇಟಿಯಲ್ಲಿಯೇ ಮುಖ್ಯಮಂತ್ರಿ ಅವರು ನಾಡಿಗೆ ಅದರಲ್ಲೂ ತವರು ಕ್ಷೇತ್ರಕ್ಕೆ ಮಹತ್ವದ ಬೇಡಿಕೆ ಇಟ್ಟಿದ್ದಾರೆ.ಇನ್ನೂ ಇದರೊಂದಿಗೆ ದೆಹಲಿ ಯಲ್ಲಿ ಇವರು ಹಲವರನ್ನು ಭೇಟಿಯಾದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.