ಷಡಕ್ಷರಿ‌ ಅವರಿಗೆ ಶಿಕ್ಷಕಿಯರ ಧ್ವನಿಯಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದವರು ಒತ್ತಾಯಿಸಿದ್ದೇನು ಗೊತ್ತಾ…..

Suddi Sante Desk

ಧಾರವಾಡ –

ಸಿ.ಎಸ್. ಷಡಾಕ್ಷರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಸಾಂವಿಧಾನಿಕ ಸಮಾನತೆ ಗಾಗಿ ಮಹಿಳಾ ನೌಕರರಿಗೆ ಮೀಸಲಾತಿ ಕಲ್ಪಿಸುವ ಕುರಿತು

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವನ್ನು ಹುಟ್ಟು ಹಾಕಿದ ದಿಟ್ಟ ಮಹಿಳೆ ಹಾಗೂ ಎಲ್ಲಾ ನೌಕರರ ವಿಶ್ವಾಸಕ್ಕೆ ದ್ವನಿಯಾಗಿದ್ದ ದಿ.ಶ್ರೀಮತಿ ಮೇರಿ ದೇವಾಸಿಯ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ.ಹಾಗಾಗಿ ರಾಜ್ಯದ ಸಮಸ್ತ ಸರ್ಕಾರಿ ನೌಕರರಲ್ಲಿ ಬಹುತೇಕ ಮಹಿಳಾ ನೌಕರರೇ ಬಹಳಷ್ಟು ಇದ್ದಾರೆ. ಎಲ್ಲಾ ಸರ್ಕಾರಿ ಮಹಿಳಾ ನೌಕರರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಅಂದಿನಿಂದಲೂ ಎಲ್ಲರೂ ನೌಕರರ ಸಂಘಕ್ಕೆ ವಾರ್ಷಿಕ ವಂತಿಕೆ ಹಣವನ್ನು ಪ್ರಾಮಾಣಿಕವಾಗಿ ಸಲ್ಲಿಸುತ್ತಾ ಸಂಘದ ಶ್ರೇಯೋಭಿವೃದ್ಧಿಗೆ ಕೈಜೋಡಿಸಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ 33% ಮಹಿಳಾ ಶಿಕ್ಷಕಿಯರಿಗೆ ಮೀಸಲಾತಿ ಕಲ್ಪಿಸಿರುವಂತೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕ್ರಿಯಾಶೀಲ, ಮಹಿಳಾಪರ ಅಪಾರ ಕಾಳಜಿ ಹೊಂದಿರುವ ಅಧ್ಯಕ್ಷರಾದ ತಾವುಗಳು ಸಹಾ ಮಹಿಳಾ ನೌಕರರಿಗೆ, ನೌಕರರ ಸಂಘದಲ್ಲಿ ಸಾಂವಿಧಾನಿಕವಾಗಿ ಸಿಗಬೇಕಾದ ಮಹಿಳಾ ಮೀಸಲಾತಿ ಕಲ್ಪಿಸಬೇಕು. ರಾಜ್ಯದ ಸಮಸ್ತ ಮಹಿಳಾ ನೌಕರರಿಗೆ ಸಮಾನ ತೆಯ ಹಾದಿಯಲ್ಲಿ ನ್ಯಾಯ ಒದಗಿಸಿ ಕೊಡಲೇ ಬೇಕಾಗಿ ಒತ್ತಾಯಿಸಿ ಮನವಿ ಸಲ್ಲಿಸುತ್ತಿದ್ದೇವೆ.

ವಿಶ್ವಾಸ ಪೂರ್ವಕವಾಗಿ -ಡಾ. ಲತಾ.ಎಸ್. ಮುಳ್ಳೂರ. ಸಂಸ್ಥಾಪಕ ರಾಜ್ಯಾಧ್ಯಕ್ಷರು.ಹಾಗೂ ಶ್ರೀಮತಿ ಜ್ಯೋತಿ.H. ರಾಜ್ಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಜಿಲ್ಲಾ ತಾಲೂಕು ಪದಾಧಿಕಾರಿಗಳು ಹಾಗೂ ಸಮಸ್ತ ಮಹಿಳಾ ನೌಕರರ ಪರವಾಗಿ ತಮ್ಮಲ್ಲಿ ಮನವಿ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.