ಜಗದೀಶ್ ಶೆಟ್ಟರ್ ಮನೆಗೆ ರಮೇಶ್ ಜಾರಕಿಹೊಳಿ ಭೇಟಿ ಚರ್ಚೆ – ಕುತೂಹಲ ಕೆರಳಿಸಿದ ಸಾಹುಕಾರ್ ಭೇಟಿ…..

Suddi Sante Desk

ಹುಬ್ಬಳ್ಳಿ-

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು‌.ಹುಬ್ಬಳ್ಳಿಯ ಕೇಶ್ವಾಪುರದ ಬಾದಾಮಿ ನಗರದಲ್ಲಿ‌ನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಡರಾತ್ರಿ ಭೇಟಿ ನೀಡಿ ಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ‌ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು.

ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು ಕಡೆ ಜನತಾ ಪರಿಹಾರ ಹಿನ್ನೆಲೆಯಲ್ಲಿವುಳ್ಳವರು ಮುಖ್ಯಮಂತ್ರಿ ಯಾಗಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಂಪುಟದಲ್ಲಿ ಮೂಲ ಬಿಜೆಪಿಗರನ್ನು ಕಡೆಗಣಿಸಿ ದ್ದು ಇದರ ಜೊತೆಗೆ ಖಾತೆ ಹಂಚಿಕೆಯಲ್ಲಿಯೂ ಅಪಸ್ವರ ಕೇಳಿಬರುತ್ತಿದೆ‌. ಈ ಎಲ್ಲ ಬೆಳವಣಿಗೆ ನಡುವೆಯೂ ಯಡಿಯೂರಪ್ಪನವರ ಕೈ ಮೇಲಾಗಿ ರುವುದು ಸಹ ಇಷ್ಟಕ್ಕೆಲ್ಲಾ ಕಾರಣ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆ ಮಧ್ಯ ಕೈ ಮುಖಂಡ ಪ್ರಕಾಶ ಹುಕ್ಕೇರಿ ಅವರು ಸಹ ಇಂದು ಜಗದೀಶ್ ಶೆಟ್ಟರ್ ಅವರನ್ನೂ ಭೇಟಿಯಾಗಿದ್ದಾರೆ. ಆದರೆ ಅವರು ಯಾವುದೇ ಕಾರ್ಯಕ್ರಮದ ಆಮಂತ್ರಣ ಪತ್ರ ನೀಡಲು ಬಂದಿದ್ದಾರೆ ಎನ್ನಲಾದರೂ ಸಹ ಕಳೆದ ಒಂದು ವಾರದಲ್ಲಿ ಮೂರನೇ ಭಾರಿಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.