ಶಾಲೆಗೆ ಹೋಗು ಎಂದಿದ್ದಕ್ಕೆ ನೇಣಿಗೆ ಶರಣಾದ 13 ವರ್ಷದ ಬಾಲಕ…..

Suddi Sante Desk

ಬೆಳಗಾವಿ –

ಶಾಲೆಗೆ ಹೋಗು ಎಂದಿದ್ದಕ್ಕೆ 13 ವರ್ಷದ ಬಾಲಕ ನೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಬೆಳಗಾವಿ ಯಲ್ಲಿ ನಡೆದಿದೆ.ಹೌದು ಬೆಳಗಾವಿಯ ಕಸಾಯಿ ಗಲ್ಲಿಯಲ್ಲಿ ಈ ಒಂದು ಘಟನೆ ನಡೆದಿದೆ.

ಶಾಹೀದ್ ಶೇಖ್ 13 ಮೃತ ಬಾಲಕನಾಗಿದ್ದಾನೆ. ನಗರದ ಖಾಸಗಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದನು ಈ ಬಾಲಕ.ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ಶಾಲೆಗೆ ಹೋಗುವಂತೆ ಬುದ್ದಿವಾದ ಹೇಳಿದ್ದಾರೆ ಪೋಷಕರು.ಹೇಳಿದ್ದು ತಪ್ಪಾಗಿ ತಿಳಿದು ಕೊಂಡ ಬಾಲಕ ಮನೆಯಲ್ಲೇ ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನೂ ಸುದ್ದಿ ತಿಳಿದ ಮಾರ್ಕೇಟ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಭೇಟಿ, ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.