ಅಂದು ಕೊಟ್ಟ ಮಾತಿನಂತೆ ನಡೆದುಕೊಂಡ ತೃಪ್ತಿ ಇದೆ – ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್

Suddi Sante Desk

ಬೆಂಗಳೂರು –

ಕಳೆದ ಜುಲೈ 19 ಮತ್ತು 22ರಂದು ನಮ್ಮ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲಾ ಯಿತು.ನಾವು ಭರವಸೆ ಕೊಟ್ಟಂತೆ ನಮ್ಮ ಪರೀಕ್ಷಾ ಕೇಂದ್ರಗಳು ಇಡೀ ರಾಜ್ಯದಲ್ಲಿ ಮಕ್ಕಳ ಸುರಕ್ಷಾ ಕೇಂದ್ರಗಳಾಗಿಯೂ ಸಹ ಕಾರ್ಯನಿರ್ವಹಿಸಿದವು. ಕೋವಿಡ್ ಹಿನ್ನೆಲೆಯಲ್ಲಿ ವಿನೂತನ ರೀತಿಯಲ್ಲಿ ನಡೆಸಿದ ಈ ಪರೀಕ್ಷೆಗಳಲ್ಲಿ ಶೇಕಡ 99.6 ಪ್ರಮಾಣ ದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ದಿಂದ ಹಾಜರಾ ಗಿ ಉತ್ತರ ಬರೆದರು.ಜುಲೈ 22ರಂದು ಪರೀಕ್ಷೆಗಳು ಮುಗಿದ ನಂತರ ನಾನು ಮಾಧ್ಯಮ ಮಿತ್ರರಿಗೆ ತಿಳಿಸಿದ್ದೆ ಈ ಪರೀಕ್ಷೆಗಳ ಫಲಿತಾಂಶವನ್ನು ಆಗಸ್ಟ್ ಹತ್ತರೊಳಗೆ ಪ್ರಕಟಿಸಲಾಗುವುದು ಎಂದು ಈಗ ಕೊಟ್ಟ ಆ ಒಂದು ಮಾತನ್ನು ನಾನು ಉಳಿಸಿಕೊಂಡ ತೃಪ್ತಿ ಇದೆ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ

ಈ ಒಂದು ವಿಚಾರ ಕುರಿತು ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಉಲ್ಲೇಖ ಮಾಡಿ ಪೊಸ್ಟ್ ಮಾಡಿದ್ದಾರೆ

ನಾಳೆ ಆಗಸ್ಟ್ 9 ನಾಳೆ ಸಂಜೆ 3.30 ಗಂಟೆ ಸುಮಾರಿಗೆ ನೂತನ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರವರು 2020-21 ನೆ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ ಎಂದರು

ಹೀಗಾಗಿ ಅಂದು ಕೊಟ್ಟ ಮಾತಿನಂತೆ ಫಲಿತಾಂಶ ಪ್ರಕಟವಾಗುತ್ತಿದೆ. ಒಂದು ರೀತಿಯ ಸಮಾಧಾನ, ತೃಪ್ತಿ ಮತ್ತು ಸಂತಸ…. ನನ್ನದು ಎಂದಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.