ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭ – ಪ್ರಾಥಮಿಕ ಶಾಲೆಯೊಂದಿಗೆ ಊಟವೂ ಆರಂಭ ಶಿಕ್ಷಣ ಸಚಿವ ಬಿ ಸಿ ನಾಗೇಶ್…..

Suddi Sante Desk

ಉಡುಪಿ –

ದಸರಾ ಮುಗಿದ ತಕ್ಷಣವೇ ಪ್ರಾಥಮಿಕ ಶಾಲೆ ಗಳೊಂದಿಗೆ ಬಿಸಿಯೂಟ ವನ್ನು ಆರಂಭ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ಉಡುಪಿ ಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗು ತ್ತಿದೆ. ಹಲವಾರು ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ಝೀರೋ ಇದೆ.ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ.ಹೀಗಾಗಿ ಪ್ರಾಥಮಿಕ ಶಾಲೆ ಗಳ ಆರಂಭದೊಂದಿಗೆ ಬಿಸಿಯೂಟ ವನ್ನು ಆರಂಭಿಸಲಾಗು ತ್ತದೆ ಎಂದರು.

ಈಗಾಗಲೇ ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭ ಮಾಡಲಾಗುತ್ತದೆ.ಜೊತೆಗೆ ದಸರಾ ಮುಗಿದ ತಕ್ಷಣ ಬಿಸಿ ಯೂಟವನ್ನು ಆರಂಭಿಸಲಾಗುತ್ತದೆ.ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು

ಇನ್ನೂ ಆನ್‌ಲೈನ್ ತರಗತಿಯಿಂದ ಕೆಲ ಗ್ರಾಮೀಣ ಮಕ್ಕಳಿಗೆ ತೊಂದರೆ ಆಗಿದೆ.ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ.90ರಷ್ಟು ಇದೆ. ದಸರಾದ ಮರುದಿನದಿಂದಲೇ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲಾಗುವುದು ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.