ಶಿಕ್ಷಕರ ಸಮಸ್ಯೆ ಗಳ ಕುರಿತು ನಾಳೆ ಮಹತ್ವದ ಸಭೆ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸಭೆ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆ ಸೇರಿದಂತೆ ಹಲವಾರು ವಿಚಾ ರಗಳ ಕುರಿತು ಚರ್ಚೆ ಮಾಡಲು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನಾಳೆ ಮಹತ್ವದ ಸಭೆ ಕರೆದಿದ್ದಾರೆ.ಹೌದು ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನ ಸೌಧ ದಲ್ಲಿನ ಮೊದಲನೇಯ ಮಹಡಿ ಯಲ್ಲಿ ಈ ಒಂದು ಸಭೆ ನಡೆಯಲಿದೆ.

ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಈ ಒಂದು ಸಭೆ ನಡೆಯಲಿದ್ದು ಸಭೆಯಲ್ಲಿ ಶಿಕ್ಷಣ ಸಚಿವರಾದ ಬಿ‌ ಸಿ ನಾಗೇಶ್ ಸೇರಿದಂತೆ ವಿಧಾನ ಪರಿಷತ್ ನ ಸರ್ವ ಸದಸ್ಯರು ಪಾಲ್ಗೊಳ್ಳಲಿದ್ದು ಸಭೆಯಲ್ಲಿ ಯಾವ ನಿರ್ಣಯ ತಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕು

ಒಟ್ಟಾರೆ ಈ ಒಂದು ಸಭೆಯಿಂದಾದರೂ ನಾಡಿನ ಶಿಕ್ಷಕರ ಸಾಕಷ್ಟು ಪ್ರಮಾಣದಲ್ಲಿನ ಸಮಸ್ಯೆ ಗಳು ಅದರಲ್ಲೂ ಪ್ರಮುಖವಾಗಿ ವರ್ಗಾವಣೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ನಾಡಿನ ಶಿಕ್ಷಕ ಬಂಧುಗಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.