ಅಧ್ಯಾಪಕನ ಬಂಧನ – ಸರ್ಕಾರಿ ಕೆಲಸ ಕೊಡಿಸೊದಾಗಿ ವಂಚನೆ ಆರೋಪದಲ್ಲಿ ಬಂಧನ…..

Suddi Sante Desk

ಬೆಂಗಳೂರು –

ಸರಕಾರಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ಕಾಲೇಜು ಅಧ್ಯಾಪಕರೊಬ್ಬರನ್ನು ಬಂಧನ ಮಾಡಲಾಗಿದೆ. ಹೌದು ಸುರೇಶ್ ಅಲಿಯಾಸ್ ನಾಗರಾಜ್ ಬಂಧಿತರಾಗಿದ್ದಾರೆ‌ ಮೈಸೂರು ನಗರದ ಖಾಸಗಿ ಕಾಲೇಜ ವೊಂದರಲ್ಲಿ ಅಧ್ಯಾಪಕನಾಗಿದ್ದು ಡಿಟಿಪಿ ಸೆಂಟರ್ ಒಂದರಲ್ಲಿ ಟೈಪಿಸ್ಟ್ ಕೆಲಸ ಮಾಡುತ್ತಿದ್ದ ಯುವತಿಗೆ ವಂಚಿಸಿದ್ದಾನೆ.ಅದೇ ಡಿಟಿಪಿ ಸೆಂಟರ್ ಗೆ ಲೆಟರ್ ಹೆಡ್ ಟೈಪ್ ಮಾಡಿಸಲು ತೆರಳುತ್ತಿದ್ದ ಆರೋಪಿ ಸುರೇಶ್ ಸರ್ಕಾರಿ ಕೆಲಸ ಕೊಡಿ ಸೋದಾಗಿ ಯುವತಿಯನ್ನು ನಂಬಿಸಿದ್ದಾನೆ.

.

ಕೆಲವು ದಿನ ಕಳೆದ ನಂತರ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕಿ ಕೆಲಸ ಇದ್ದು ನೇಮಕಾತಿ ಆದೇಶ ಪಡೆಯಲು ಆರು ಲಕ್ಷ ಹಣ ಕೊಡಬೇಕಾಗುತ್ತದೆ ಎಂದು ಆರೋಪಿ ತಿಳಿಸಿದ್ದಾನೆ.ಈತನ ಮಾತು ನಂಬಿದ ಯುವತಿ ಸಾಲಸೋಲ ಮಾಡಿ ಹಣ ಹೊಂದಿಸಿ ಕೊಟ್ಟಿದ್ದಾರೆ.ಈ ಬಳಿಕ ಬೇರೊಂದು ಡಿಟಿಪಿ ಸೆಂಟರ್ ನಲ್ಲಿ ‌ ಸರ್ಕಾರದ ಲೆಟರ್ ಹೆಡ್ ನಂತೆ ಮಾಡಿಸಿ ಮಹಾರಾಣಿ ಕಾಲೇಜಿನಲ್ಲಿ ಎಫ್ ಡಿ ಎ ಎಂದು ಆಫರ್ ಲೆಟರ್ ಕೊಡಿಸಿದ್ದಾನೆ.ಇದರಿಂದ ಖುಷಿಯಾದ ಯುವತಿ ಅಧ್ಯಾಪಕನಿಗೆ ಧನ್ಯವಾದ ತಿಳಿಸಿದ್ದರು.

ಆಫರ್ ಲೆಟರ್ ಸಹಿತ ವಿಧಾನ ಸೌಧದ ಎಂ.ಎಸ್. ಬಿಲ್ಡಿಂಗ್ ನ ಶಿಕ್ಷಣ ಇಲಾಖೆಗೆ ದಾಖಲೆ ಪರಿಶೀಲನೆಗೆ ಬಂದಾಗ ಸತ್ಯ ಬಯಲಿಗೆ ಬಂದಿದೆ.ಈ ನಂತರ ಶಿಕ್ಷಣ ಇಲಾಖೆಯಿಂದಲೆ ಪೊಲೀಸ್ ಠಾಣೆಗೆ ದೂರು ನೀಡಲಾ ಗಿದೆ.ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಈತ ಇನ್ನೂ ಹಲವರಿಗೆ ವಂಚನೆ ಮಾಡಿ ರುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.