ಶಾಲಾ ಆರಂಭದ ಬೆನ್ನಲ್ಲೇ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಇಲಾಖೆ – ಶಿಕ್ಷಣ ಸಚಿವರಿಂದ ಮಾಹಿತಿ…..

Suddi Sante Desk

ತುಮಕೂರು –

ಶಾಲಾ ಆರಂಭದ ಬೆನ್ನಲ್ಲೇ ನಾಡಿನ ಶಿಕ್ಷಕರಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದಾರೆ‌.ಹೌದು ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಶಿಕ್ಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದಾರೆ. ಶಿಕ್ಷಕರ ವರ್ಗಾವಣೆಗೆ ಸೆಪ್ಟೆಂಬರ್ 5 ರಿಂದಲೇ ಕೌನ್ಸಿಲಿಂಗ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಶಿಕ್ಷಕರ ವರ್ಗಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು ಮುಂದಿನ ಮಾಹೆಯ 5 ರಿಂದ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗು ವುದು ಯಾವುದೇ ಗೊಂದಲಕ್ಕೆ‌ ಅವಕಾಶವಿಲ್ಲದೆ ಸುಮಾರು 35-40 ಸಾವಿರ ಶಿಕ್ಷಕರನ್ನು ಅವರು ಬಯಸಿದ ಸ್ಥಳಕ್ಕೆ ವರ್ಗಾವಣೆ ‌ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಇನ್ನು ಮುಂದೆ ರಾಜ್ಯದಲ್ಲಿ ಟಿ.ಇ.ಟಿ. ಪರೀಕ್ಷೆ ಗಳನ್ನು‌ 6 ತಿಂಗಳಿಗೊಮ್ಮೆ ನಿಗದಿತ ದಿನಾಂಕಗಳಂದು ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ.ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.