ನಾಳೆ ಬೆಂಗಳೂರಿನಲ್ಲಿ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ಕಾರ್ಯಕ್ರಮ – ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ ಚಿಂತನ ಮಂಥನ…..

Suddi Sante Desk

ಬೆಂಗಳೂರು –

ನಾಳೆ ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಭವನ ದಲ್ಲಿ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯ ಮಟ್ಟದ ಮೊದಲ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳೊ ಂದಿಗೆ ಚಿಂತನ ಮಂಥನ ಕಾರ್ಯಕ್ರಮ ನಡೆಯಲಿದೆ

ಕರ್ನಾಟಕ ರಾಜ್ಯ ಶಿಕ್ಷಕರ ಸಂಘಗಳ‌ ಪರಿಷತ್ತಿನ ರಾಜ್ಯ ಘಟಕದ ಪದಾಧಿಕಾರಿಗಳು ಹಾಗೂ ಜಿಲ್ಲಾ ಇದುವರೆಗೆ ಆಯ್ಕೆಯಾದ ಜಿಲ್ಲಾ ಅದ್ಯಕ್ಷರು ಮತ್ತು ಪ್ರದಾನ ಕಾರ್ಯದರ್ಶಿಗಳಿಗೆ ನೌಕರರ ಸಂಘದ ರಾಜ್ಯಾದ್ಯಕ್ಷರು ಸಿ ಎಸ್ ಷಡಕ್ಷರಿ‌ ಅವರಿಂದ ಗೌರವ ಸನ್ಮಾನವು ನಡೆಯಲಿದೆ

ರಾಜ್ಯ ಘಟಕದ ಪದಾಧಿಕಾರಿಗಳು ಹಾಗೂ ಜಿಲ್ಲಾ ಅದ್ಯಕ್ಷರು ಪ್ರದಾನ ಕಾರ್ಯದರ್ಶಿಗಳು ಈ ಒಂದು ಕಾರ್ಯಕ್ರಮ ದಲ್ಲಿ ಹಾಜರಿರುವುದು ಎಂದು ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯ ಸಂಘಟನೆಯ ಕಾರ್ಯದರ್ಶಿ ಎಲ್ ಐ ಲಕ್ಕಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಗೇ ಈ ಒಂದು ಕಾರ್ಯಕ್ರಮಕ್ಕೆ ಆಗಮಿಸಿ ಶೋಭೆ ತರಲು ಕೋರಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.