ಆರ್ಥಿಕ ಸಂಕಷ್ಟದ ನಡುವೆ ಸಚಿವರಿಗೆ,ಸಂಸದರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಪ್ಟ್…..

Suddi Sante Desk

ಬೆಂಗಳೂರು –

ಆರ್ಥಿಕ ಸಂಕಷ್ಟ ಮತ್ತು ಆರ್ಥಿಕ ಬಿಕ್ಕಟ್ಟಿನ ನಡುವೆಯೇ ರಾಜ್ಯ ಸರ್ಕಾರ ರಾಜ್ಯದ 32 ಸಚಿವರು ಮತ್ತು 28 ಸಂಸದರಿಗೆ ಹೊಸ ವಾಹನಗಳ ಭಾಗ್ಯ ನೀಡಿದೆ.ಹೌದು ಹಳೇಯ ಕಾರುಗಳನ್ನು ಬದಲಾವಣೆ ಮಾಡಿ ಈಗ ಹೊಸದಾಗಿ 13.8 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಇನೋವಾ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದೆ.

ಹೌದು ಸಿಬ್ಬಂದಿ ಮತ್ತು ಆಡಳಿತ ಸೇವೆಗಳ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯದಲ್ಲಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಸಚಿವರು ಮತ್ತು ಸಂಸದರ ವಾಹನ ಖರೀದಿಗೆ ನೀಡಿರುವ ಭತ್ಯೆಯನ್ನ 23 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ.

ಸರ್ಕಾರದ ಈ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವ್ರು, ‘ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷ ಮುಂದೂಡಬೇಕಿತ್ತು’ ಎಂದು ಒತ್ತಾಯ ಮಾಡಿದ್ದಾರೆ

ನಿಯಮಗಳ ಪ್ರಕಾರ, ಮಂತ್ರಿಗಳು ಅಥವಾ ಚುನಾಯಿತ ಪ್ರತಿನಿಧಿಗಳು ಒಂದು ಲಕ್ಷ ಕಿ.ಮೀ ಓಟವನ್ನು ಪೂರ್ಣಗೊಳಿಸಿದ ನಂತರ ಅಥವಾ ಖರೀದಿಸಿದ ಏಳು ವರ್ಷಗಳ ನಂತರವಷ್ಟೇ ತಮ್ಮ ಕಾರುಗಳನ್ನ ಬದಲಾಯಿಸಬೇಕು. ನಂತರ ಈ ಕಾರನ್ನು ಸಾಮಾನ್ಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಇರಿಸಲಾಗುತ್ತೆ ಮತ್ತು ಜಿಲ್ಲೆಗಳಿಗೆ ಭೇಟಿ ನೀಡುವ ವಿಐಪಿಗಳ ಪ್ರಯಾಣದ ಅಗತ್ಯಗಳಿಗೆ ಬಳಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಸಂಸದರಿಗೆ 33 ಲಕ್ಷ ರೂಪಾಯಿಯ 17 ಟೊಯೊಟಾ ಇನ್ನೋವಾ ಕ್ರಿಸ್ಟಸ್ (23 ಲಕ್ಷ ಎಕ್ಸ್ ಶೋರೂಂ) ಐಷಾರಾಮಿ ಎಸ್ ಯುವಿ, ಟೊಯೊಟಾ ಫಾರ್ಚೂನರ್ʼನ್ನ ಆಯ್ಕೆ ಮಾಡಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.