ನಿಂತ ಲಾರಿಗೆ ಕಾರು ಡಿಕ್ಕಿ ಸ್ಥಳ ದಲ್ಲೇ ಇಬ್ಬರ ಸಾವು – ಹೆಂಡತಿ ಮಗಳನ್ನು ಕಳೆದುಕೊಂಡು ಆಸ್ಪತ್ರೆ ಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ರುವ ವೈಧ್ಯ…..

Suddi Sante Desk

ಬೆಳಗಾವಿ –

ರಸ್ತೆ ಪಕ್ಕದಲ್ಲೇ ನಿಂತುಕೊಂಡಿದ್ದ ಲಾರಿಯೊಂದಕ್ಕೆ ಕಾರೊಂದು ಡಿಕ್ಕಿಯಾದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗ ಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟರೆ ಗಂಭೀರ ಗಾಯಗೊಂಡಿ ರುವ ಪತಿ ಪರಿಸ್ಥಿತಿ ಚಿಂತಾಜನಕವಾಗಿದೆ.

ಇನೋವಾ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವೈದ್ಯೆ ಡಾ. ಶ್ವೇತಾ ಎಸ್.ಮುರಗೋಡ (40) ಪುತ್ರಿ ಶಿಯಾ ಮುರಗೋಡ (7) ಮೃತಪಟ್ಟವರಾಗಿದ್ದಾರೆ.

ವೈದ್ಯ ಸಚಿನ ಮುರಗೋಡ ತೀವ್ರ ಗಾಯಗೊಂಡಿದ್ದಾರೆ. ಬೆಳಗಾವಿ ನಗರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಕೇಶ್ವರ ಪಟ್ಟಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ನರಸಿಂಗಪುರ ಗ್ರಾಮದ ಬಳಿಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಇವರ ಇನೋವಾ ವೇಗವಾಗಿ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.