ರಸ್ತೆ  ಪಕ್ಕದಲ್ಲಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ  ಮೂವರು ಸಾವು – ಕೆಲಸಕ್ಕೆ ಹೊರಟಿದ್ದವರ ಪ್ರಾಣ ಕಸಿದುಕೊಂಡ ಕಾರು…..

Suddi Sante Desk
ರಸ್ತೆ  ಪಕ್ಕದಲ್ಲಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ  ಮೂವರು ಸಾವು – ಕೆಲಸಕ್ಕೆ ಹೊರಟಿದ್ದವರ ಪ್ರಾಣ ಕಸಿದುಕೊಂಡ ಕಾರು…..

ಸುಳ್ಯ

ರಸ್ತೆ  ಪಕ್ಕದಲ್ಲಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಯಾಗಿ ಮೂವರು ಸಾವಿಗೀಡಾದ ಘಟನೆ ಸುಳ್ಯ ದಲ್ಲಿ ನಡೆದಿದೆ ಕೆಲಸಕ್ಕೆ ಹೊರಟಿದ್ದವರ ಪ್ರಾಣ ಕಸಿದುಕೊಂಡಿದೆ ಕಾರು.

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಯಾಗಿ ಮೂವರು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗ ಳಾದ ಕಾರ್ಮಿಕರಾದ ಚಂದ್ರಪ್ಪ, ರೇಗಪ್ಪ, ಮಹಾಂತೇಶ ಮೃತ ಕಾರ್ಮಿಕರಾಗಿದ್ದಾರೆ.

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ.ಗಂಭೀರ ಗಾಯಗೊಂಡಿದ್ದ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಸುಳ್ಯ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.