This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

international News

ಬಿಸಿಯೂಟ ದಲ್ಲಿ ಕೋಟಿ ಕೋಟಿ ರೂಪಾಯಿ ವಂಚನೆ – ಪ್ರಧಾನ ಗುರುಗಳ ಮೇಲೆ ದಾಖಲಾಯಿತು ದೂರು‌…..

WhatsApp Group Join Now
Telegram Group Join Now

ಆಗ್ರಾ –

ಮಧ್ಯಾಹ್ನದ ಬಿಸಿಯೂಟ ಯೋಜನೆಯ 11.46 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕ ರೊಬ್ಬರ ಮೇಲೆ ಭ್ರಷ್ಟಾಚಾರದ ಪ್ರಕರಣ ದಾಖಲಿಸಲಾಗಿದೆ ಇನ್ನೂ ಫಿರೋಜಾಬಾದ್‌ನ ಬೇಸಿಕ್ ಎಜುಕೇಶನ್ ಇಲಾಖೆ ಯಡಿಯಲ್ಲಿ ಬರುವ ಶಾಲೆಯ ಮುಖ್ಯಶಿಕ್ಷಕ ರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಾಂಶುಪಾಲ ನಕಲಿ ದಾಖಲೆಗಳನ್ನು ಬಳಸಿ ಸರ್ಕಾರೇತರ ಸಂಸ್ಥೆ(ಎನ್‌ಜಿಒ) ಎಂದು ನೋಂದಾಯಿಸಿದ್ದಾರೆ.ಬ್ಯಾಂಕ್‌ ಗಳ ಅಧಿಕಾರಿಗಳು ಮತ್ತು ಅವರ ಸಿಬ್ಬಂದಿಯ ಸಹಾಯ ದಿಂದ 11.46 ಕೋಟಿ ಮಧ್ಯಾಹ್ನದ ಬಿಸಿಯೂಟ ಯೋಜ ನೆಯ ಹಣವನ್ನು ತೆಗೆದುಕೊಂಡು ಬಳಸಿದ್ದಾರೆ ಎಂದು ಆಗ್ರಾದ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ

ಫಿರೋಜಾಬಾದ್ ಜಿಲ್ಲೆಯ ಮೂಲ ಶಿಕ್ಷಣ ಇಲಾಖೆಯ ಶಿಕ್ಷಕ ಚಂದ್ರಕಾಂತ್ ಶರ್ಮಾ ವಿರುದ್ಧ ಭ್ರಷ್ಟಾಚಾರದ ಪ್ರಕರಣ ದಾಖಲಾಗಿದೆ.ಫಿರೋಜಾಬಾದ್ ಜಿಲ್ಲೆಯ ಶಿಕೋ ಹಾಬಾದ್ ನಿವಾಸಿಯಾಗಿದ್ದಾರೆ.ಫಿರೋಜಾಬಾದ್ ಜಿಲ್ಲೆಯ ತುಂಡ್ಲಾದ ಜಾಜುಪುರದ ಪ್ರಾಥಮಿಕ ಶಾಲೆಯಲ್ಲಿ ಪ್ರಾಂಶು ಪಾಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಶರ್ಮಾ ಹೇಳಿದ್ದಾರೆ.

ಜುಲೈ 27 ರಂದು ಆಗ್ರಾದ ವಿಜಿಲೆನ್ಸ್ ಪೊಲೀಸ್ ಠಾಣೆ ಯಲ್ಲಿ ಮೂಲ ಶಿಕ್ಷಣ ಇಲಾಖೆ ಮತ್ತು ಬ್ಯಾಂಕ್‌ಗಳ ಇತರ ಕೆಲವು ಉದ್ಯೋಗಿಗಳು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಫಿರೋಜಾಬಾದ್‌ನ ಶಿಕೋಹಾಬಾದ್‌ ನಲ್ಲಿ ನೋಂದಣಿಯಾಗಿರುವ ಎನ್‌ಜಿಒ ಸರಸ್ವತ್ ಅವಾಸಿಯ ಶಿಕ್ಷಾ ಸೇವಾ ಸಮಿತಿ ಮೂಲಕ ಚಂದ್ರಕಾಂತ್ ಶರ್ಮಾ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಹಣ ವನ್ನು ವಂಚಿಸಿದ್ದಾರೆ.2007 ರಲ್ಲಿ ಈ ಸಂಸ್ಥೆ ನೋಂದಾಯಿ ಸಲ್ಪಟ್ಟಿದೆ.ಎನ್‌ಜಿಒ ಎಂದು ನೋಂದಾಯಿಸಲು ನಕಲಿ ಪಡಿತರ ಚೀಟಿ ಮತ್ತು ಐಡಿ ಕಾರ್ಡ್‌ಗಳನ್ನು ಬಳಸಿದ್ದಾರೆ ಎಂದು ಅಲೋಕ್ ಶರ್ಮಾ ಹೇಳಿದ್ದಾರೆ.

ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ ಶಿಕ್ಷಕ ತನ್ನ ತಂದೆಯನ್ನು ಎನ್‌ಜಿಒ ಅಧ್ಯಕ್ಷರನ್ನಾಗಿ ಅವರ ತಾಯಿ ಯನ್ನು ಮ್ಯಾನೇಜರ್ ಮತ್ತು ಕಾರ್ಯದರ್ಶಿಯನ್ನಾಗಿ ಮತ್ತು ಆತನ ಪತ್ನಿಯನ್ನು ಖಜಾಂಚಿಯನ್ನಾಗಿ ಮಾಡಿ ದ್ದಾರೆ.NGO ನಲ್ಲಿ ಇತರ ಸ್ಥಾನಗಳನ್ನು ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಹೆಸರಿನಲ್ಲಿವೆ.ಇಷ್ಟೇ ಅಲ್ಲದೆ ಆರೋಪಿಯು ತಮ್ಮ ತಾಯಿ ಸೇರಿದಂತೆ ಕೆಲವು ಎನ್‌ಜಿಒ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿ ದರು ಎಂದು ಪೊಲೀಸರು ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk