ಮುಖ್ಯೋಪಾಧ್ಯಾಯನ ಮೇಲೆ ದಾಖಲಾಯಿತು ದೂರು – ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ದೂರು ದಾಖಲು…..

Suddi Sante Desk
ಮುಖ್ಯೋಪಾಧ್ಯಾಯನ ಮೇಲೆ ದಾಖಲಾಯಿತು ದೂರು – ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ದೂರು ದಾಖಲು…..

ಉಡುಪಿ

SSLC ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಇನ್ನೇನು ಕಾಲೇಜಿ ಮೆಟ್ಟಿಲೇ ರಬೇಕಿತ್ತು ಆದ್ರೆ, ದುರ್ವೈವ ಅಂದರೆ ಹೆಡ್​ ಮಾಸ್ಟರ್​ ಟಿಸಿ ಕೊಡಲಿಲ್ಲವೆಂದು ವಿದ್ಯಾರ್ಥಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಉಡುಪಿ ಯಲ್ಲಿ ನಡೆದಿದೆ.

ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ​​​SSLC ಉತ್ತೀರ್ಣನಾಗಿದ್ದ ವಿದ್ಯಾರ್ಥಿ ಯೋರ್ವರ ಆತ್ಮಹತ್ಯೆ ಮಾಡಿಕೊಂಡಿದ್ದು ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.ಟಿಸಿ ಕೊಟ್ಟಿ ಲ್ಲವೆಂದು ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ (16) ಆತ್ಮಹತ್ಯೆಗೆ ಶರಣಾಗಿದ್ದಾನೆ.

ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದಿದ್ದಾರೆ ಎಂದು ಡೆತ್​ ನೋಟ್ ಬರೆದಿಟ್ಟು ನಿತಿನ್ ಆಚಾರಿ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೈಂದೂರು ಸರಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದ.

ಈ ಹಿನ್ನೆಲೆಯಲ್ಲಿ ಟಿಸಿ ಪಡೆದುಕೊಂಡು ಕಾಲೇಜಿಗೆ ಪ್ರವೇಶ ಪಡೆದುಕೊಳ್ಳಬೇಕಿತ್ತು. ಹೀಗಾಗಿ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ ಆದ್ರೆ, ಮುಖ್ಯೋಪಾಧ್ಯಾಯ ಸುರೇಶ್ ಭಟ್ ಅವರು ಟಿಸಿ ಕೊಡದೆ ಬೈದಿದ್ದಾರಂತೆ

ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾ ಗಿದ್ದಾನೆ. ಈ ಬಗ್ಗೆ ಡೆತ್​ನಲ್ಲಿ ಉಲ್ಲೇಖಿಸಿದ್ದಾನೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಉಡುಪಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.