ಗದಗ –
ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕಾಲು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯರಾಗಿದ್ದಾರೆ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.

ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇನ್ನೂ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
