ಕೌಟುಂಬಿಕ‌ ಕಲಹ, ಪೊಲೀಸ್ ಠಾಣೆ ಮೆಟ್ಟಿಲೇರಿದ ಹುಬ್ಬಳ್ಳಿಯ ಖ್ಯಾತ ವೈದ್ಯ ದಂಪತಿಗಳು

Suddi Sante Desk

ಹುಬ್ಬಳ್ಳಿ –

ನಗರದ ಖ್ಯಾತ ವೈದ್ಯ ದಂಪತಿಗಳ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮಟ್ಟಿಲೇರಿದ್ದು, ಪತಿ ಹಾಗೂ ಪತ್ನಿ ದೂರು ಪ್ರತಿ ದೂರು ದಾಖಲಿಸಿ ಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.‌

ಪತ್ನಿಯ ವಿರುದ್ದವೇ ಹುಬ್ಬಳ್ಳಿಯ ಖ್ಯಾತ ನ್ಯೂರೋ ಸರ್ಜನ್ ಡಾ.ಕ್ರಾಂತಿಕಿರಣ್ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪತ್ನಿ ಡಾ.ಶೋಭಾ ವಿರುದ್ದ‌ 17 ಲಕ್ಷ ವಂಚನೆ ಮಾಡಿದ ಆರೋಪದಡಿ ದೂರು ದಾಖಲಿಸಿದ್ದಾರೆ. ಇದಲ್ಲದೆ ಕಳೆದ ವರ್ಷ ಪತ್ನಿಯಿಂದಲೇ ಜೀವ ಬೇದರಿಕೆ ಇದೆಯೆಂದು ದೂರು ನೀಡಿದ್ದರು.

ಆದರೆ ಪತ್ನಿ ಡಾ. ಶೋಭಾ ಅವರು ಪತಿ ವಿರುದ್ಧ ತನ್ನ ಸಹಿ ಇಲ್ಲದೇ ಆಸ್ಪತ್ರೆ ಬ್ಯಾಂಕ್ ಅಕೌಂಟ್ ಚೇಂಜ್ ಮಾಡಿಸಿಸಲು ಸಂಚು ರೂಪಿಸಲಾಗಿದೆ ಅಂತ ದೂರು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರಸಿದ್ದ ಖಾಸಗಿ ಆಸ್ಪತ್ರೆಯನ್ನು ದಂಪತಿಗಳೇ ಕಟ್ಟಿ, ಪತಿ ಆಸ್ಪತ್ರೆಯ ಅಧ್ಯಕ್ಷರಾದರೇ ಪತ್ನಿ ಶೋಭಾ ನಿರ್ದೇಶಕಿಯಾಗಿದ್ದರು.

ತನ್ನ ಅನುಮತಿಯಿಲ್ಲದೇ ಬ್ಯಾಂಕ್ ಅಕೌಂಟ್ ಚೇಂಜ್ ಮಾಡಿದ್ದಲ್ಲದೆ ಅಲ್ಲದೇ ಪತಿಯ ಮೇಲೆ ಜೀವಬೇದರಿಕೆ, ಹಲ್ಲೆ ಆರೋಪದಡಿ ಕೇಸ್ ದಾಖಲಿಸಿದ್ದಾರೆ.

ಡಾ.ಕ್ರಾಂತಿಕಿರಣ 2018 ರಲ್ಲಿ ಹುಬ್ಬಳ್ಳಿ- ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು‌.ಕೊನೆ ಗಳಿಗೆಯಲ್ಲಿ ಟಿಕೆಟ್‌ ಮಿಸ್ ಆಗಿತ್ತು

ಹುಬ್ಬಳ್ಳಿಯಲ್ಲಿ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯನ್ನು ನಡೆಸುತ್ತಿರುವ ದಂಪತಿಗಳ ಕೌಟುಂಬಿಕ ಜಗಳ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.