ಅಡಿಕೆ ತೋಟದ ಆದಾಯದಲ್ಲಿ ಬಸ್ ಖರೀದಿಸಿದ ಸರ್ಕಾರಿ ಶಾಲೆ ಶಿಕ್ಷಕರ ಪರಿಶ್ರಮದಿಂದ ಶಾಲೆಗೆ ಬರುತ್ತಿದೆ ಸಖತ್ ಆದಾಯ…..

Suddi Sante Desk

ವಿಟ್ಲ

ಹೌದು ಇದೊಂದು ಸ್ವತಃ ಆದಾಯ ದಿಂದಲೇ ಬಸ್ ಖರೀದಿ ಮಾಡಿದ ಸರ್ಕಾರಿ ಶಾಲೆಯ ಚಿತ್ರಣ ವಿಟ್ಲ ಸಮೀಪದ ಮಿತ್ತೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ತನ್ನ ಅಡಿಕೆ ತೋಟದ ಆದಾಯ ದಿಂದ ಬಸ್‌ ಸೌಲಭ್ಯ ಹೊಂದಿದೆ.112 ವರ್ಷಗಳ ಇತಿಹಾಸ ಇರುವ ಈ ಶಾಲೆ ಸುಮಾರು 4 ಎಕರೆ ಜಮೀನು ಹೊಂದಿದೆ.ಎಸ್‌ಡಿಎಂಸಿಯವರು,ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ 2017ರಲ್ಲಿ ಇಲ್ಲಿ 628 ಅಡಿಕೆ ಸಸಿಗ ಳನ್ನು ನೆಟ್ಟು, ಬೆಳೆಸಿದ್ದಾರೆ.

ಈಗ ಅಡಿಕೆ ಇಳುವರಿ ಬರುತ್ತಿದೆ. ಈ ತೋಟದ ನಿರ್ವಹ ಣೆಯನ್ನು ಗುತ್ತಿಗೆ ನೀಡಲಾಗಿದ್ದು ಇದರಿಂದ ಶಾಲೆಗೆ ವಾರ್ಷಿಕ ₹2.50 ಲಕ್ಷ ಆದಾಯ ಲಭಿಸುತ್ತಿದೆ.ಈ ಆದಾ ಯದಲ್ಲಿ 26 ಆಸನಗಳ ಬಸ್‌ ಖರೀದಿಸಲಾಗಿದ್ದು ಮಕ್ಕಳ ನ್ನು ಶಾಲೆಗೆ ಕರೆತರಲು ಈ ಬಸ್‌ ಬಳಸಲಾಗುತ್ತಿದೆ.ಈ ತೋಟದ ಆದಾಯದಿಂದಲೇ ಬಸ್‌ನ ನಿರ್ವಹಣಾ ವೆಚ್ಚವನ್ನು ಎಸ್‌ಡಿಎಂಸಿ ಭರಿಸಲಿದೆ.

ಶಾಸಕ ಸಂಜೀವ ಮಠಂದೂರು ಅವರು ಈ ಬಸ್‌ ಸೇವೆಗೆ ಈಚೆಗೆ ಚಾಲನೆ ನೀಡಿ ಗ್ರಾಮಸ್ಥರು ಶಾಲೆಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.ಶಾಲೆಗೆ ಕೊಠಡಿ ಮಂಜೂರು ಮಾಡಲಾಗಿದ್ದು ಹೆಚ್ಚುವರಿ ಒಂದು ಕೊಠಡಿ ಹಾಗೂ ಕಾಂಕ್ರೀಟ್ ರಸ್ತೆಯನ್ನು ಮುಂದಿನ ದಿನಗಳಲ್ಲಿ ಮಂಜೂರು ಮಾಡಲಾಗುವುದು ಎಂದರು.ಇಡ್ಕಿದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ. ಸುಧೀರ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಆದಂ ಎಂ.ಎಂ.ಎಸ್.ಉಪಾಧ್ಯಕ್ಷೆ ಮಲ್ಲಿಕಾ ತಾರನಾಥ,ಮುಖ್ಯ ಶಿಕ್ಷಕಿ ಸರೋಜಾ ಎ. ಇದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.