ಬೆಳ್ಳಂ ಬೆಳಿಗ್ಗೆ ಸರ್ಕಾರಿ ಶಾಲೆಗೆ ಕನ್ನ ಅಪಾರ ಪ್ರಮಾಣದ ಬೆಲೆ ಬಾಳುವ ವಸ್ತುಗಳು ಕಳುವು – ನಾಲ್ಕನೇ ಬಾರಿಗೆ ಶಾಲೆಯಲ್ಲಿ ಕಳ್ಳತನ…..

Suddi Sante Desk

ರಾಮನಗರ –

ಸರ್ಕಾರಿ ಶಾಲೆಯೊಂದಕ್ಕೆ ಕಳ್ಳರು ಕನ್ನ ಹಾಕಿದ ಘಟನೆ ರಾಮನಗರ ತಾಲ್ಲೂಕಿನ ಪಾದರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಒಂದುಕಳ್ಳತನ ನಡೆದಿದ್ದು ಎರಡು ಕಂಪ್ಯೂಟರ್,ಮಾನಿಟರ್,ಕೀ ಬೋರ್ಡ್ಸ್ ಮತ್ತು ಪಂಪ್ ಮೋಟಾರ್ ಗಳನ್ನು ಕಳ್ಳರು ಕಳ್ಳತನ ಮಾಡಿ ಹೊತ್ತುಕೊಂಡು ಹೋಗಿದ್ದಾರೆ

ಶಾಲೆಗೆ ಅಳವಡಿಸಿದ್ದ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿ ಮುಖ್ಯ ಶಿಕ್ಷಕರ ಕೊಠಡಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಬೀರುವಿನಲ್ಲಿದ್ದ ಕಡತಗಳನ್ನು ಚೆಲ್ಲಿ, ಅಲ್ಲಿದ್ದ ವಿವಿಧ ಕೊಠಡಿಗಳ ಬೀಗದ ಕೀಗಳನ್ನು ತೆಗೆದುಕೊಂಡಿದ್ದಾರೆ. ನಂತರ ಕೊಠಡಿಗಳನ್ನು ತೆಗೆದು ಕಳ್ಳತನ ಮಾಡಿದ್ದಾರೆ. ಈ ಶಾಲೆಯಲ್ಲಿ ಇದು ನಾಲ್ಕನೇ ಬಾರಿಗೆ ಕಳ್ಳತನ ನಡೆದಿದೆ ಎಂದು ಮುಖ್ಯ ಶಿಕ್ಷಕ ಆರ್.ಕೆ. ಬೈರಲಿಂಗ ಯ್ಯ ತಿಳಿಸಿದರು.ಇನ್ನೂ ಸುದ್ದಿ ತಿಳಿದ ಗ್ರಾಮೀಣ ಠಾಣೆ ಪೊಲೀಸರು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.