ದಾವಣಗೆರೆ –
ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆ – ಲಂಚಕ್ಕೆ ಬೇಡಿಕೆ ಇಟ್ಟು ಪೊಲೀಸ್ ಠಾಣೆಯಲ್ಲಿ ಯೇ ಟ್ರ್ಯಾಪ್ ಹೌದು
ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್ಸಟೇಬಲ್ ರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಜಪ್ತಿ ಮಾಡಿದ ವಾಹನವನ್ನು ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿ ದ್ದರು.ಹೀಗಾಗಿ ಈ ಕುರಿತಂತೆ ವಾಹನ ಮಾಲಿಕರು ಲೋಕಾಯುಕ್ತರಿಗೆ ದೂರನ್ನು ನೀಡಿದ್ದರು.
ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಲೋಕಾಯುಕ್ತ ಟೀಮ್ ಠಾಣೆ ಆವರಣದಲ್ಲಿ ಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆಯನ್ನು ಲೋಕಾಯುಕ್ತ ಬಲೆಗೆ ಹಾಕಿಸಿ ದ್ದಾರೆ.ದಾವಣಗೆರೆ ತಾಲೂಕಿನ ಮಾಯಕೊಂಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೊನ್ನೂರಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು
5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ಜಪ್ತಿ ಮಾಡಿದ್ದ ಬೈಕ್ ಹಿಂದಿರು ಗಿಸಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.ಪೊಲೀಸ್ ಠಾಣೆಯ ಆವರಣದಲ್ಲಿ ಯೇ ಲಂಚ ಪಡೆಯುತ್ತಿದ್ದಾಗ
ಲೋಕಾಯುಕ್ತ ಎಸ್ ಪಿ ಎಂ.ಎಸ್.ಕೌಲಾಪುರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದ್ದು ಸಧ್ಯ ಹೆಡ್ ಕಾನ್ಸ್ಟೇಬಲ್ ನನ್ನು ವಶಕ್ಕೆ ತಗೆದುಕೊಂಡಿ ರುವ ಲೋಕಾಯುಕ್ತ ಟೀಮ್ ವಿಚಾರಣೆ ಮಾಡುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..