ತುಮಕೂರು –
ಕಾಲೇಜು ಆರಂಭದ ದಿನವೇ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ತಿಪಟೂರು ತಾಲ್ಲೂಕು ವೈ.ಟಿ.ರಸ್ತೆಯ ಹೆಡಗರಹಳ್ಳಿ ಬಳಿ ಈ ಒಂದು ರಸ್ತೆ ಅಪಘಾತ ನಡೆದಿದೆ.
ಟ್ಯಾಂಕರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತವಾಗಿದ್ದು ಸ್ಥಳದಲ್ಲಿಯೇ ಶಶಾಂಕ್ (20) ಸ್ಥಳದಲ್ಲೇ ಸಾವಿಗೀಡಾದ ವಿದ್ಯಾರ್ಥಿಯಾಗಿದ್ದಾನೆ.
ಚನ್ನರಾಯಪಟ್ಟಣ ತಾಲ್ಲೂಕಿನ ಚೀಚಗೊಂಡನಹಳ್ಳಿ ಮೂಲದವರಾಗಿದ್ದಾರೆ ಯುವಕ. ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದನು ಯುವಕ.
ಇಂದು ಕಾಲೇಜು ಆರಂಭವಾಗುತ್ತಿದ್ದಂತೆ ಕಾಲೇಜಿಗೆ ಹೊರಟ ವಿದ್ಯಾರ್ಥಿ ಅಪಘಾತದಲ್ಲಿ ಸಾವಿಗೀಡಾಗಿದ್ದು ಇನ್ನೂ ವಿಷಯ ತಿಳಿದ ತಿಪಟೂರು ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು.