ಉಳ್ಳಾಲ –
ರಸ್ತೆ ಅಪಘಾತ ದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿ ಯೊಬ್ಬರು ಚಿಕಿತ್ಸೆ ಫಲಸದೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.ಹೌದು ಇಲ್ಲಿನ ಠಾಣೆ ವ್ಯಾಪ್ತಿಯ ಸಂಕೋಳಿಗೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜೋಯ್ ಲ್ಯಾಂಡ್ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
ಮೃತ ದೈಹಿಕ ಶಿಕ್ಷಕಿಯನ್ನು ಕೊಲ್ಯ ನಿವಾಸಿ ಗುಲಾಬಿ(54) ಎಂದು ಗುರುತಿಸಲಾಗಿದೆ.ಅವರು ಬುಧವಾರ ಬೆಳಗ್ಗೆ ಅಂಗಡಿಗೆಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರು ಕಡೆಯಿಂದ ಬಂದ ವಾಹನ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ದೇರಳ ಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆ ಯಲ್ಲಿ ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದ ಅವರು ಚಿಕಿತ್ಸೆ ಫಲಸದೇ ಸಾವನ್ನಪ್ಪಿದರು.ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.