ಶಾಲಾ ಆರಂಭದ ಬೆನ್ನಲ್ಲೆ ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ – ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನ…..

Suddi Sante Desk

ಚುರು –

ಹೋಮ್ ವರ್ಕ್ ಮಾಡಿಲ್ಲವೆಂದು ಶಿಕ್ಷಕನೊರ್ವ ವಿದ್ಯಾರ್ಥಿ ಯೊಬ್ಬರನ್ನು ಹಿಗ್ಗಾ ಮುಗ್ಗಾ ಥಳಿಸಿ ತೀವ್ರವಾಗಿ ಗಾಯ ಗೊಂಡ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಚುರು ವಿನಲ್ಲಿ ನಡೆದಿದೆ.ಹೌದು ಕೊಟ್ಟ ಹೋಮ್ ವರ್ಕ್ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾರೆ.ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ನಡೆದಿದೆ.ಹೋಮ್ವರ್ಕ್ ಮಾಡಿಲ್ಲ ಎಂದು ಶಿಕ್ಷಕ ಮಗುವನ್ನು ನೆಲಕ್ಕೆ ಹಾಕಿ ಒದ್ದಿದ್ದಾರಂತೆ ನಂತರ ಮುಷ್ಟಿ ಕಟ್ಟಿ ಯಿಂದ ಹೊಡೆದಿದ್ದಾನೆ.ತುಂಬಾ ಹೊಡೆದ ನಂತರ ಬಾಲಕನ ಮೂಗಿನಿಂದ ರಕ್ತ ಬರಲಾರಂಭಿಸಿದೆ.

ಬಳಿಕ ಆತ ಮೂರ್ಛೆ ಹೋಗಿದ್ದಾನೆ.ಮಗುವಿಗೆ ಪ್ರಜ್ಞೆ ಮರಳದಿದ್ದಾಗ,ಆರೋಪಿತ ಶಿಕ್ಷಕ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾನೆ.ಅಲ್ಲಿ ವೈದ್ಯರು ವಿದ್ಯಾರ್ಥಿ ಮೃತಪಟ್ಟಿ ದ್ದಾನೆ ಎಂದು ಹೇಳಿದ್ದಾರೆ.ಕೋಲಾಸಾರ್ ಗ್ರಾಮದ ನಿವಾಸಿ 13 ವರ್ಷದ ಗಣೇಶ್ ಖಾಸಗಿ ಶಾಲೆಯಲ್ಲಿ ಓದಿದ್ದಾನೆ. ಬುಧವಾರ ಬೆಳಗ್ಗೆ ಮಗು ಶಾಲೆಗೆ ಹೋಗಿತ್ತು. ಹೋಮ್ ವರ್ಕ್ ಮಾಡದ ಕಾರಣ ಶಿಕ್ಷಕ ಮನೋಜ್ ತುಂಬಾ ಹೊಡೆದಿದ್ದಾರೆ.ಈ ಕಾರಣದಿಂದ ವಿದ್ಯಾರ್ಥಿ ಮೃತಪಟ್ಟಿ ದ್ದಾನೆ.ತಂದೆಯ ವರದಿಯ ಮೇರೆಗೆ ಶಿಕ್ಷಕನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಲಸಾರ್ ಎಸ್ ಎಚ್ ಒ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.