ಆತ್ಮಹತ್ಯೆಗೆ ಶರಣಾದ ಶಿಕ್ಷಕ ಗಣಿತ ಶಿಕ್ಷಕನ ಆತ್ಮಹತ್ಯೆಯ ಕಾರಣ ಕೇಳಿದರೆ ಶಾಕ್ ಆಗುತ್ತೆ……

Suddi Sante Desk

ಕರೂರ್ –

ಗಣಿತ ವಿಷಯದ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕರೂರಿನಲ್ಲಿ ನಡೆದಿದೆ. ತಮಿಳು ನಾಡಿನ ಕರೂರಿನಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ 12ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಕೊಂಡು ಸಾವನ್ನಪ್ಪಿದ ಕೆಲವು ದಿನಗಳ ನಂತರ ನಿನ್ನೆ ತಡರಾತ್ರಿ ಆರೋಪಿತ ಗಣಿತ ಶಿಕ್ಷಕ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸರವಣನ್(42) ಆತ್ಮಹತ್ಯೆ ಮಾಡಿ ಕೊಂಡ ಶಿಕ್ಷಕರಾಗಿದ್ದಾರೆ.ಸಾವಿಗೂ ಮುನ್ನ ಶಿಕ್ಷಕ ಡೆತ್ ನೋಟ್ ಅನ್ನು ಬರೆದಿದ್ದು ಇದರಲ್ಲಿ ವಿದ್ಯಾರ್ಥಿನಿ ಮೃತ ಪಟ್ಟ ನಂತರ ಆಕೆಯ ಸಾವಿನ ಬಗ್ಗೆ ಜನರು ಮತ್ತು ವಿದ್ಯಾರ್ಥಿಗಳು ಗೇಲಿ ಮಾಡುತ್ತಿದ್ದರು ಇದರಿಂದ ಮುಜುಗ ರಕ್ಕೊಳಗಾಗಿ ಹಾಗೂ ಹುಡುಗಿ ಯಾರ ಹೆಸರನ್ನೂ ಹೇಳದಿ ದ್ದರೂ ನನ್ನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದಲ್ಲಿ ಬರೆಯಲಾಗಿದೆ.

ಕಳೆದ ವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡ 12ನೇ ತರಗತಿ ವಿದ್ಯಾರ್ಥಿನಿ ಡೆತ್ನೋಟ್ ಬರೆದಿದ್ದು ಕರೂರ್ ಜಿಲ್ಲೆಯಲ್ಲಿ ಲೈಂಗಿಕ ಕಿರುಕುಳದಿಂದ ಸಾಯುವ ಕೊನೆಯ ಹುಡುಗಿ ನಾನೇ ಆಗಿರಬೇಕು.ನನ್ನ ಈ ನಿರ್ಧಾ ರಕ್ಕೆ ಕಾರಣ ಯಾರು ಎಂದು ಹೇಳಲು ನನಗೆ ಭಯವಾ ಗಿದೆ. ನಾನು ಈ ಭೂಮಿಯ ಮೇಲೆ ದೀರ್ಘಕಾಲ ಬದು ಕಲು ಮತ್ತು ಇತರರಿಗೆ ಸಹಾಯ ಮಾಡಲು ಬಯಸಿದ್ದೆ, ಆದರೆ ಈಗ ನಾನು ಈ ಪ್ರಪಂಚವನ್ನು ಬೇಗನೆ ತೊರೆಯ ಬೇಕಾಗಿದೆ ಎಂದು ಬರೆದ್ದಳಂತೆ ಇನ್ನೂ ತನಿಖೆಯ ಭಾಗ ವಾಗಿ ಪೊಲೀಸರು ಈಗಾಗಲೇ ಆಕೆಯ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.ಸರವಣನ್ ಅವರ ನ್ನೂ ಪ್ರಶ್ನಿಸಲಾಗಿತ್ತು.ಇದರಿಂದ ಒತ್ತಡಕ್ಕೊಳಗಾದ ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗಣಿತ ಶಿಕ್ಷಕನ ಮೇಲೆ ಯಾವುದೇ ಅನುಮಾನವಿಲ್ಲ ಎಂದು ಪೊಲೀಸ್ ಅಧಿಕಾರಿ ಗಳು ಖಚಿತಪಡಿಸಿದ್ದಾರೆ.ಆದರೂ ಸರವಣನ್ ನಿನ್ನೆ ರಾತ್ರಿ ತಿರುಚ್ಚಿಯಲ್ಲಿರುವ ತಮ್ಮ ಮಾವನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದು ಸಧ್ಯ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.