This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

BEO ಕಚೇರಿ ಮುಂದೆ ಶಿಕ್ಷಕನ ಪ್ರತಿಭಟನೆ – ಇಲಾಖೆಯ ಮೇಲಾಧಿಕಾರಿ ವಿರುದ್ಧ ಒಬ್ಬಂಟಿ ಯಾಗಿ ಧರಣಿ…..

WhatsApp Group Join Now
Telegram Group Join Now

ಕೊಪ್ಪಳ

ಸಾಮಾನ್ಯವಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ಮಾಡುವುದನ್ನು ನಾವು ನೋಡಿದ್ದೇವೆ.ಆದರೆ ಇಲ್ಲೊಂದು ಊರಲ್ಲಿ ತಮ್ಮ ಇಲಾಖೆಯ ಮೇಲಾಧಿಕಾರಿ ಬಿಇಓ ವಿರುದ್ಧವೇ ಶಿಕ್ಷಕರೊಬ್ಬರು ಮೌನ ಪ್ರತಿಭಟನೆ ನಡೆಸುತ್ತಿದ್ದಾನೆ.‌ಹೌದು ಕೊಪ್ಪಳ ಜಿಲ್ಲೆ ಇದು ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಹಿಂದುಳಿದ ಜಿಲ್ಲೆ.‌ಈ‌ ಜಿಲ್ಲೆ ಶೈಕ್ಷಣಕವಾಗಿಯೂ ಸಹ ಹಿಂದುಳಿದ ಜಿಲ್ಲೆಯಾಗಿದೆ.‌ ಇಂತಹ ಹಿಂದುಳಿದ ಜಿಲ್ಲೆಯಾದ ಕೊಪ್ಪಳದ ಬಿಇಓ ಕಚೇರಿ ಎದುರು ಬಿಇಓ ವಿರುದ್ಧವೇ ಶಿಕ್ಷಕನೊರ್ವ ಪ್ರತಿಭಟನೆ ನಡೆಸುತ್ತಿದ್ದಾರೆ

ವೀಕಲಚೇತನರ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿರುವ ಬೀರಪ್ಪ ಅಂಡಗಿ ಈ ಮುಂಚೆ ಎನ್ ಪಿ ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಕೊಪ್ಪಳ‌ ನಗರದ ಎಂ ಎಚ್ ಪಿ ಎಸ್ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬೀರಪ್ಪ ಅಂಡಗಿ ಇದೀಗ ತಮ್ಮದೇ ಇಲಾಖೆಯ ಬಿಇಓ ಉಮೇಶ್ ಪೂಜಾರ್ ವಿರುದ್ಧ ಬಿಇಓ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿ ದ್ದಾರೆ.ಸಿಪಿಎಸ್ ಶಾಲೆಯಲ್ಲಿ ಪ್ರಭಾರಿ ಮುಖ್ಯೋಪಾಧ್ಯಾ ಯರಾಗಿ ಸೇವೆ ಸಲ್ಲಿಸುತ್ತಿರು ಇವರು.ಬಿಸಿಯೂಟ ಯೋಜನೆಯಲ್ಲಿ ಬೀರಪ್ಪ ಅಂಡಗಿ ಅವ್ಯವಹಾರ ಎಸಗಿ ದ್ದಾರೆ ಎಂದು ಆರೋಪಿಸಿ ಹೋರಾಟಗಾರ ಬಸವರಾಜ ಶೀಲವಂತರ ದೂರು‌ ನೀಡಿದ್ದರು.ಈ ದೂರು ಆಧರಿಸಿ ಬಿಇಓ ಉಮೇಶ್ ಪೂಜಾರಿ ಬೀರಪ್ಪ ಅಂಡಗಿ ವಿರುದ್ಧ ತನಿಖಾಧಿಕಾರಿಗಳನ್ನು ನೇಮಿಸಿ ತನಿಖೆಗೆ ಆದೇಶಿಸಿದ್ದರು.

ಈ ತನಿಖಾ ತಂಡ ಈಗಾಗಲೇ ಬೀರಪ್ಪ ಅಂಡಗಿ ಆರೋ ಪದ ಪ್ರಕರಣದ ಕುರಿತು ತನಿಖೆ ನಡೆಸಿ 4 ತಿಂಗಳ ಹಿಂದೆ ಯೇ ವರದಿ ನೀಡಿದೆ.ತನ್ನ ಮೇಲಿನ ಆರೋಪದ ಕುರಿತಾದ ತನಿಖೆಯ ವರದಿಯನ್ನು ನೀಡುವಂತೆ ಬೀರಪ್ಪ ಅಂಡಗಿ ನಾಲ್ಕು ತಿಂಗಳ ಹಿಂದೆಯೇ ಮಾಹಿತಿ ಹಕ್ಕಿನಡಿ ಮಾಹಿತಿ ಕೇಳಿದ್ದಾರೆ.ಆದರೆ ಮಾಹಿತಿ ಕೇಳಿ ನಾಲ್ಕು ತಿಂಗಳಾದರೂ ಸಹ ಬಿಇಓ ಉಮೇಶ್ ಪೂಜಾರ್ ಇಲ್ಲಿಯವರೆಗೂ ಮಾಹಿತಿ ನೀಡಿಯೇ ಇಲ್ಲವಂತೆ.ಇದರಿಂದಾಗಿ ಮಾಹಿತಿ‌ ಬಿಇಓ ಉಮೇಶ್ ಪೂಜಾರ್ ವಿರುದ್ಧ ಬೀರಪ್ಪ ಅಂಡಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾನೊಬ್ಬ ಸಾಮಾನ್ಯ ಶಿಕ್ಷಕನಾಗಿದ್ದರೆ ನನ್ನ ಮೇಲಿ‌ನ ಆರೋಪಗಳ ಬಗ್ಗೆ ನಾನು ತೆಲೆಕೆಡಸಿಕೊಳ್ಳುತ್ತಿದ್ದಿಲ್ಲ.‌ಆದರೆ ನಾನೊಬ್ಬ ಜವಾಬ್ದಾರಿಯುತ ಸ್ಥಾಪನದಲ್ಲಿದ್ದು ಪ್ರತಿನಿತ್ಯ ನನಗೆ ನೂರಾರು ಜನ ಶಿಕ್ಷಕರು,ನೌಕರರು ನನ್ನ ಮೇಲಿನ ಆರೋಪದ ಕುರಿತಾದ ತನಿಖೆಯ ಬಗ್ಗೆ ಕೇಳುತ್ತಾರೆ. ಇದರಿಂದಾಗಿ ಸಹಜವಾಗಿಯೇ ನನಗೆ ಮಾನಸಿಕ‌ವಾಗಿ ಹಿಂಸೆ ಆಗುತ್ತಿದೆ.ಈ ಹಿನ್ನಲೆಯಲ್ಲಿ ನನ್ನ ಮೇಲಿನ ಆರೋ ಪದ ಕುರಿತು ಸ್ಪಷ್ಟವಾಗಿ ತಿಳಿಯಬೇಕೆಂದರೆ ತನಿಖಾ ವರದಿ ಬಹಿರಂಗಗೊಳ್ಳಬೇಕು ಹೀಗಾಗಿ ನನಗೆ ತನಿಖಾ ವರದಿಯ ಮಾಹಿತಿ ನೀಡಬೇಕು ಜೊತೆಗೆ ನಾನು ತಪ್ಪು ಮಾಡಿದ್ದರೆ ನನ್ನ ಮೇಲೆ ಇಲಾಖೆಯ ಅಧಿಕಾರಿಗಳು ಕ್ರಮಕೈಗೊಳ್ಳಲಿ ಅಂತಾರೆ ಬೀರಪ್ಪ ಅಂಡಗಿ.


Google News

 

 

WhatsApp Group Join Now
Telegram Group Join Now
Suddi Sante Desk