ಭೀಕರ ರಸ್ತೆ ಅಪಘಾತ – ಸ್ಥಳದಲ್ಲೇ ಐವರು ಸಾವು – ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ್ದ ಬಸ್ ಗೆ ಗುದ್ದಿದ ಕಾರು….

Suddi Sante Desk

ಈರೋಡ್ –

ತಮಿಳುನಾಡಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಈರೋಡ್ ನ ಕಾವೇರಿಪಟ್ಟಣಂ ಬಳಿ ನಡೆದಿದೆ.ಕಾವೇರಿ ಪಟ್ಟಣಂ ಬಳಿ ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು ಸರ್ಕಾರಿ ಬಸ್ ಗೆ ಹಿಂಬದಿಯಿಂದ ಬಂದು ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್ ನಲ್ಲಿದ್ದ ಪ್ಯಾಸೆಂಜರ್ ದೇವರಾಜು, ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಓಮ್ನಿಯಲ್ಲಿದ್ದ ಗೌತಮ್ , ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.