ದೊಡ್ಡಬಳ್ಳಾಪುರ –
ಹೊಟೇಲ್ ಗೆ ಊಟಕ್ಕೆ ಪತಿ ಕರೆದುಕೊಂಡು ಹೋಗಲಿಲ್ಲ ಎಂಬ ಒಂದೇ ಒಂದು ಕಾರಣಕ್ಕಾಗಿ ಬೇಸತ್ತು ಹೆತ್ತ ಇಬ್ಬರು ಮಕ್ಕಳಿಗೆ ಪೆಟ್ರೊಲ್ ಹಾಕಿ ಕೊನೆಗೆ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಎಸ್ ಎಂ ಗೊಲ್ಲಹಳ್ಳಿಯಲ್ಲಿ ಯಲ್ಲಿ ನಡೆದಿದೆ.ಮಹಿಳೆಯೊಬ್ಬಳು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ.
ಸಂಧ್ಯಾ ವಿವಾಹವು ಶ್ರೀಕಾಂತ ಜತೆ ಐದು ವರ್ಷಗಳ ಹಿಂದೆ ನಡೆದಿದೆ.ಅತ್ತೆ-ಮಾವನ ಜತೆ ಸಂಧ್ಯಾ ನೆಲೆಸಿದ್ದರು.ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು.
ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ.ಎಲ್ಲರೂ ಅನ್ಯೋನ್ಯವಾಗಿದ್ದರು ಈ ಆತ್ಮಹತ್ಯೆಯ ಹಿಂದಿನ ಕಾರಣ ನಿಗೂಢವಾಗಿತ್ತು.ಅದನ್ನೀಗ ಪೊಲೀಸರು ಭೇದಿಸಿದ್ದಾರೆ. ಸಂಧ್ಯಾ ಅವರು ಹುಟ್ಟಿ ಬೆಳೆದಿದ್ದು ಪಟ್ಟಣದಲ್ಲಿ. ಬೆಂಗಳೂ ರಿನ ಯಲಹಂಕದಲ್ಲಿ ಅವರು ಬೆಳೆದದ್ದು.ಅವರಿಗೆ ವಾರ ಕ್ಕೊಮ್ಮೆಯಾದರೂ ಹೊರಗಡೆ ಸುತ್ತಾಡಿ ಮಕ್ಕಳ ಜೊತೆ ಯಲ್ಲಿ ಹೋಟೆಲ್ನಲ್ಲಿ ತಿನ್ನುವ ಆಸೆ.ಆದರೆ ಹಳ್ಳಿಯಲ್ಲಿ ಹುಟ್ಟಿದ್ದ ಗಂಡನಿಗೆ ಇದು ಇಷ್ಟವಿರಲಿಲ್ಲ.ಮನೆಯಲ್ಲಿಯೇ ಚೆನ್ನಾಗಿ ತಿನ್ನುವ ಬದಲು ಹೊರಗಡೆ ಆಹಾರ ಏಕೆ ಎಂದು ಕೇಳುತ್ತಿದ್ದರು.ಇದರಿಂದ ಸಂಧ್ಯಾ ತುಂಬಾ ನೊಂದುಕೊಂಡಿ ದ್ದರು.ಹೋಟೆಲ್ಗೆ ಕರೆದುಕೊಂಡು ಹೋಗುವಂತೆ ಗಂಡ ನಿಗೆ ಸಂಧ್ಯಾ ನಿತ್ಯವೂ ಹೇಳುತ್ತಿದ್ದರು.ತವರು ಮನೆಯಲ್ಲಿ ಇರುವಾಗ ವಾರಕ್ಕೆ ಎರಡು ಬಾರಿಯಾದರೂ ಹೋಟೆಲ್ಗೆ ಹೋಗುತ್ತಿದ್ದರು.ಆದರೆ ಗಂಡ ಅದನ್ನು ಒಪ್ಪುತ್ತಿಲ್ಲ ಎಂದು ಸಂಧ್ಯಾ ಅಮ್ಮನ ಬಳಿ ಕೂಡ ನೋವು ತೋಡಿಕೊಂಡಿ ದ್ದರು.ತನ್ನ ಜೀವನ ಇಷ್ಟೇ ಆಗಿಹೋಯ್ತು.ತನ್ನ ಆಸೆ ಈಡೇ ರುವುದೇ ಇಲ್ಲ ಎಂದು ನೊಂದುಕೊಂಡ ಸಂಧ್ಯಾ ಜೀವನ ವೇ ಬೇಡ ಎಂದುಕೊಂಡು ಇಬ್ಬರು ಮಕ್ಕಳ ಜತೆ ಪೆಟ್ರೋ ಲ್ ಸುರಿದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ದೂರು ದಾಖಲು ಮಾಡಿಕೊಂಡ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ