ACB ಬಲೆಗೆ ಸ್ಮಾರ್ಟ್ ಸಿಟಿ ತಾಂತ್ರಿಕ ವಿಭಾಗದ ಮ್ಯಾನೇಜರ್

Suddi Sante Desk

ಬೆಳಗಾವಿ –

ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಬಸ್ ನಿಲ್ದಾಣ ಕಾಮಗಾರಿಗೆ ಹಣ ಮಂಜೂರು ಮಾಡಲು ಲಂಚದ ಬೇಡಿಕೆ ಇಟ್ಟಿದ್ದ ಸ್ಮಾರ್ಟ್ ಸಿಟಿ ಯೋಜನೆ ಯ ಮ್ಯಾನೇಜರ್ ರೊಬ್ಬರು ಬೆಳಗಾವಿ ಯಲ್ಲಿ ACB ಬಲೆಗೆ ಬಿದ್ದಿದ್ದಾರೆ. 23.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಅಧಿಕಾರಿ.

ಬೆಳಗಾವಿ ಸ್ಮಾರ್ಟ್ ಸಿಟಿ ತಾಂತ್ರಿಕ ವಿಭಾಗದ ಮ್ಯಾನೆಜರ್ ಸಿದ್ಧನಾಯಕ್ ದೊಡ್ಡಬಸಪ್ಪ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ‌‌.ಮನೆಯಲ್ಲಿ ಲಂಚ ಸ್ವೀರಿಸುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಸ್ಮಾರ್ಟ್ ಸಿಟಿ ಬಸ್ ನಿಲ್ದಾಣ ಕಾಮಗಾರಿ ಹಣ ಮಂಜೂರು ಮಾಡಲು ಲಂಚದ ಬೇಡಿಕೆ ಇಟ್ಟಿದ್ದರು.

ಸಂಜೀವ ನವಲಗುಂದ ಎಂಬ ಗುತ್ತಿಗೆದಾರ ದೂರನ್ನು ನೀಡಿದ್ದರು. ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಅಧಿಕಾರಿ‌ ವಿರುದ್ಧ ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.