This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಸಬ್ಸಿಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ತೋಟಗಾರಿಕೆ ಹಿರಿಯ ಅಧಿಕಾರಿ ಎಸಿಬಿ ಬಲೆಗೆ – 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಬಲೆಗೆ ಹಾಕಿಸಿದ ರೈತ

WhatsApp Group Join Now
Telegram Group Join Now

ಚಾಮರಾಜನಗರ –

ಹನಿ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ಹಣ ಮಂಜುರಾತಿಗೆ ಲಂಚಕ್ಕೆ ಬೇಡಿಕೆ ಯಿಟ್ಟಿದ್ದ ತೊಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ.

ಗುಂಡ್ಲುಪೇಟೆಯ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪರವರೇ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಅಧಿಕಾರಿಯಾಗಿದ್ದಾರೆ. ಹನಿ ‌ನೀರಾವರಿ ಯೋಜನೆಯ ಸಲಕರಣೆಗಳ ವಿತರಕ ಕಡಬೂರು ಮಂಜು ರವರ ಬಳಿ 50 ಸಾವಿರ ₹ ಬೇಡಿಕೆ ಇಟ್ಟಿದ್ದರು.

ಇದರಿಂದ ಬೇಸತ್ತ ಕಡಬೂರು ಮಂಜು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಎಸಿಬಿ ಬಂದ ದೂರಿನನ್ವಯ ಡಿವೈಎಸ್ಪಿ ಸದಾನಂದ, ಇನಸ್ಪೇಕ್ಟರ್ ದೀಪಕ್, ಕಿರಣ್, ಸಿಬ್ಬಂದಿಗಳಾದ ಸತೀಶ್, ಮಹದೇವಸ್ವಾಮಿ, ಕಾರ್ತಿಕ್, ನಾಗೇಂದ್ರ ರವರು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ತಗೆದು ಕೊಂಡು ವಿಚಾರಣೆ ಮಾಡತಾ ಇದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ರೈತರಿಗೆ ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣವನ್ನು ಮಂಜೂರು ಮಾಡಲು ಪ್ರತಿ ಘಟಕಕ್ಕೆ ಇಂತಿಷ್ಟು ಎಂದು ಲಂಚದ ಹಣ ನಿಗದಿಪಡಿಸಿದ್ದ ಶಿವಲಿಂಗಪ್ಪ ಎಸಿಬಿ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ.

ಎಸಿಬಿ ದಾಳಿಯಿಂದ ತೋಟಗಾರಿಕೆ ಇತರೆ ಸಿಬ್ಬಂದಿಗಳು ಎಚ್ಚೆತ್ತುಕೊಂಡಿದ್ದು, ರೈತರ ಕಡತಗಳನ್ನು ವಿಲೇವಾರಿ ಮಾಡಲು ಮುಂದಾಗಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk