ಶಾಲೆಗೆ ರಾಜ್ಯ ಸರ್ಕಾರದಿಂದ ನೋಟೀಸ್ ಜಾರಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ…..

Suddi Sante Desk

ಬೆಂಗಳೂರು –

ಬೆಂಗಳೂರಿನ ರಿಚರ್ಡ್ಸ್‌ ಟೌನ್‌‌ ಕ್ಲಾರೆನ್ಸ್‌ ಪ್ರೌಢಶಾಲೆಯಲ್ಲಿ ಬೈಬಲ್‌ ಅಧ್ಯಯನ ಕಡ್ಡಾಯಗೊಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಶಾಲೆಗೆ ನೋಟಿಸ್‌ ಜಾರಿ ಮಾಡಿದ್ದು ಈ ಬಗ್ಗೆ ವಿವರ ನೀಡುವಂತೆ ಆದೇಶಿಸಿದೆ.ಪೊಷಕರ ದೂರುಗಳನ್ನು ಆಧರಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಈಗಾಗಲೇ ಶಾಲೆಗೆ ನೋಟಿಸ್‌ ನೀಡಿದೆ.ಶಾಲೆಯ ಪ್ರತಿಕ್ರಿಯೆಯ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದರು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್‌ ಬೈಬಲ್‌ ಕಡ್ಡಾಯಗೊಳಿಸಿರುವ ಕ್ಲಾರೆನ್ಸ್‌ ಶಾಲೆಯ ನಡೆಯು ರಾಜ್ಯ ಶಿಕ್ಷಣ ನೀತಿಯ ಉಲ್ಲಂಘನೆಯಾಗಿದೆ. ಬೇರೆ ಬೋರ್ಡ್‌ ಶಾಲೆಗಳಿಗೆ ನಿರಾಕ್ಷೇಪಣ ಪತ್ರವನ್ನು ನೀಡುವ ಮೊದಲು ಕಾಯಿದೆಯ ನಿಬಂಧನೆಗಳಿಗೆ ಒಳಪ ಟ್ಟಿರಬೇಕೆಂದು ಒತ್ತಿಹೇಳುತ್ತೇವೆ.ಧಾರ್ಮಿಕ ಪುಸ್ತಕಗಳನ್ನು ಬೋಧನೆ ಮಾಡಲು ಪ್ರತ್ಯೇಕ ನಿಬಂಧನೆಗಳಿಲ್ಲ.ಇದೆಲ್ಲವೂ ನಿರಾಕ್ಷೇಪಣ ಪತ್ರದಲ್ಲಿ ಉಲ್ಲೇಖಗೊಂಡಿರುತ್ತದೆ ಎಂದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.