ಶಾಸಕನ ಮಗನ ಮೇಲೆ ಅಟ್ಯಾಕ್ ಹತ್ಯೆಗೆ ಯತ್ನಿಸಿದ ಆರೋಪಿಗಳು

Suddi Sante Desk

ತುಮಕೂರು –

ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಅವರ ಮಗ ತೇಜ್ ಜಯರಾಮ್ ಅವರ ಮೇಲೆ ದುಷ್ಕ ರ್ಮಿಗಳು ತುಮಕೂರು ತಾಲ್ಲೂಕಿನ ಹೆಬ್ಬೂರು ಬಳಿ ದಾಳಿ ಮಾಡಿ ಹತ್ಯೆ ಮಾಡಲು ಯತ್ನ ನಡೆಸಿದ್ದಾರೆ .

ಶಾಸಕರ ಪುತ್ರ

ತೇಜ್ ಜಯರಾಮ ಮೇಲೆ ಹಲ್ಲೆ ಮಾಡುತ್ತಲೇ ಅಲ್ಲಿಂದ ತಪ್ಪಿಸಿಕೊಂಡು ಗುಬ್ಬಿ ತಾಲೂಕಿನ ನೆಟ್ಟಿಕೆರೆ ಕ್ರಾಸ್ ಬಳಿ ಶಾಸಕ ಮಸಾಲೆ ಜಯರಾಮ್ ಅವರ ಮಗ ತೇಜ್ ಬರುತ್ತಲೇ ಅಲ್ಲಿ ಕೆಲವರು ಅವರ ಕಪಾಳಕ್ಕೆ ಹೊಡೆದು ಮಚ್ಚಿ ನಿಂದ ಹಲ್ಲೆ ಮಾಡಲು ಮುಂದಾದಾಗ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಹೋಗಿದ್ದಾರೆ.

ಶಾಸಕ ಮಸಾಲೆ ಜಯರಾಮ್

ಇನ್ನೂ ಕೂಡಲೇ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರು, ಲಾಂಗ್, ಮಚ್ಚು, ಕಾರದಪುಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನೂ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಬೆಂಬಲಿಗರು ಹೀಗೆ ಹಲ್ಲೆ ಮಾಡಿದ್ದು ಎಂಬ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸರ ತನಿಖೆ ಯಿಂದ ಹೊರಬರಬೇಕಿದೆ

ಇನ್ನೂ ಇಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮುಸುಕಿನ ಗುದ್ದಾಟ ವಿದ್ದು ಈ ಘಟನೆಯಿಂದ ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದ ನ್ನು ಕಾದು ನೋಡಬೇಕಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.