ಧಾರವಾಡ –
ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಅಪರ ಆಯುಕ್ತರಾಗಿರುವ ಆಗಮಿಸಿದ ಶ್ರೀಮತಿ ಜಯಶ್ರೀ.ಶಿಂತ್ರಿ ಅವರನ್ನು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ.ಜಿಲ್ಲಾ ಘಟಕ ಧಾರವಾಡ ವತಿಯಿಂದ ಸ್ವಾಗತಿಸಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಆಗಮಿಸಿದ ಎಲ್ಲ ಜಿಲ್ಲಾ ಪದಾಧಿಕಾರಿಗಳಿಗೆ ಡಾ.ಲತಾ.ಎಸ್.ಮುಳ್ಳೂರ ಸಂಸ್ಥಾಪಕ ರಾಜ್ಯಾಧ್ಯಕ್ಷರು ರಾಜ್ಯಘಟಕದ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು
ಮಾನ್ಯ ಅಪರ ಆಯುಕ್ತರಿಗೆ ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘಟನೆಯ ಬಗ್ಗೆ. ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಅವರಿಗೆ ವಿವರಿಸಲಾಯಿತು ಸಂಪೂರ್ಣ ನನ್ನ ಸಹಕಾರ ಇದೆ ನಿಮ್ಮ ಸಂಘಟನೆಗೆ ಏನೇ ಶಿಕ್ಷಕಿಯರ ಸಮಸ್ಯೆಗಳಿದ್ದರು ನನಗೆ ಫೋನ್ ಮಾಡಬಹುದು ಎಂದು ತಿಳಿಸಿದರು
ಸಮಸ್ತ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ವತಿಯಿಂದ ಹಾಗೂ ಸಮಸ್ತ ಶಿಕ್ಷಕಿಯರ ಪರವಾಗಿ ಅಪರ ಆಯುಕ್ತರಾದ ಶ್ರೀಮತಿ ಜಯಶ್ರೀ.ಶಿಂತ್ರಿ ಧನ್ಯವಾದಗಳನ್ನು ಸಲ್ಲಿಸಲಾಯಿತು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..