ಬೆಂಗಳೂರು –
7ನೇ ವೇತನ ಬೇಕಾದರೆ ತಾಳ್ಮೆಯಿಂದ ಇರಬೇಕಂತೆ ಗೃಹ ಸಚಿವರ ಭರವಸೆ ಹೋರಾಟದ ಸಂದೇಶದ ಬೆನ್ನಲ್ಲೇ ರಾಜ್ಯದ ಸರ್ಕಾರಿ ನೌಕರರಿಗೆ ಗೃಹ ಸಚಿವರು ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲವಂತೆ ಹೌದು ಇಂತಹ ದೊಂದು ಹೇಳಿಕೆಯನ್ನು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು
7ನೇ ವೇತನ ಆಯೋಗ ಜಾರಿಗೆ ಸೇರಿದಂತೆ ರಾಜ್ಯದ ಸರ್ಕಾರಿ ನೌಕರರ ಪ್ರಮುಖ 3 ಬೇಡಿಕೆ ಗಳ ಕುರಿತಂತೆ ಹೋರಾಟದ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ಇತ್ತ ಈ ಒಂದು ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಒಂದು ವಿಚಾರದಲ್ಲಿ ರಾಜ್ಯದ ಸರ್ಕಾರಿ ನೌಕರರು ಸಮಾಧಾನದಿಂದ ತಾಳ್ಮೆಯಿಂದ ಇರಬೇಕು ಎಲ್ಲವನ್ನು ಒಂದೇ ದಿನ ಜಾರಿಗೆ ತರಲು ಆಗೋದಿಲ್ಲ ಎಂದು ಮಾರ್ಮಿಕವಾಗಿ ಮಾತ ನಾಡಿದ್ದಾರೆ.7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವಂತೆ ಸರ್ಕಾರಿ ನೌಕರರು ಮನವಿ ಮಾಡಿದ್ದರು.
ಇದಕ್ಕೆ ಸಿಎಂ ಕೂಡ ಭರವಸೆ ನೀಡಿದ್ದರು ಆದರೆ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಬಗ್ಗೆ ಯಾವುದೇ ನಿರ್ಧಾರ ಹೊರ ಬಿದ್ದಿರಲಿಲ್ಲ ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ ತಾಳ್ಮೆಯಿಂದ ಇರಿ ಎಂದು ಅವರು ಮನವಿ ಮಾಡಿದರು.
7ನೇ ವೇತನ ಆಯೋಗ ಶಿಫಾಸು ಜಾರಿಗೆ ತರಲು ಸರ್ಕಾರಕ್ಕೆ 18,0000 ಸಾವಿರ ಕೋಟಿ ಬೇಕು. ಇದರ ಜೊತೆಗೆ ಒಪಿಎಸ್ ಜಾರಿಗೆ ಸಹ ನೂರಾರು ಕೋಟಿ.ಬೇಕು. ಹಾಗಾಗಿ ಒಂದೇ ದಿನದಲ್ಲಿ ಎಲ್ಲವನ್ನು ಜಾರಿಗೆ ತರಲು ಸಾಧ್ಯವಿಲ್ಲ. ನಾವು ಯಾರಿಗೂ ಮೋಸ ಮಾಡಲ್ಲ, ತಾಳ್ಮೆಯಿಂದ ಇರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..