ಮತ್ತೆ ಕೆಲ ಸಚಿವರ ಖಾತೆ ಅದಲು ಬದಲು – ಭಿನ್ನಮತದಿಂದ ಶಮನ ಮಾಡಲು ಬದಲಾವಣೆ

Suddi Sante Desk

ಬೆಂಗಳೂರು –

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಅದಲು-ಬದಲು ಆಟ ಮುಂದುವರಿದಿದ್ದು, ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರಿಬ್ಬರ ಖಾತೆ ಬದಲಾವಣೆ ಮಾಡಿದ್ದಾರೆ.

ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡ ಸಚಿವ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಸಿಎಂ ಬಿಎಸ್ವೈ ಮಾಧುಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ಖಾತೆ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸಣ್ಣ ನೀರಾವರಿ ಇಲಾಖೆ ಪಡೆಯುವಲ್ಲಿ ಮಾಧುಸ್ವಾಮಿ ಯಶಸ್ವಿಯಾಗಿದ್ದಾರೆ.

ಮಧ್ಯಾಹ್ನ ವೈದ್ಯಕೀಯ ಖಾತೆ ಹಿಂಪಡೆದಿದ್ದ ಸಿಎಂ ಬಿಎಸ್ವೈ, ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರು. ಈಗ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಯೋಗೇಶ್ವರ್‌ಗೆ ನೀಡಿ, ಮಾಧುಸ್ವಾಮಿಗೆ ಸಣ್ಣ ನೀರಾವರಿ ನೀಡಿದ್ದಾರೆ.ಸಣ್ಣ ನೀರಾವರಿ ಖಾತೆಗೆ ಪಟ್ಟುಹಿಡಿದು ಮುನಿಸುಕೊಂಡಿದ್ದ ಮಾಧುಸ್ವಾಮಿ ಮುನಿಸು ಶಮನಗೊಂಡಿದೆ.

ತನ್ನ ಕೈಯಿಂದ ಜೆ.ಸಿ. ಮಾಧುಸ್ವಾಮಿಗೆ ಹೋಗಿದ್ದ ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆಯುವಲ್ಲಿ ಡಾ.ಕೆ.ಸುದಾಕರ್ ಇಂದು ಬೆಳಗ್ಗೆ ಯಶಸ್ವಿಯಾಗಿದ್ದರು. ಆ ಮೂಲಕ ಸುಧಾಕರ್ ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆಗೆ ವೈದ್ಯಕೀಯ ಶಿಕ್ಷಣ ಖಾತೆಯೂ ಸಿಕ್ಕಂತಾಗಿದೆ.

ಇನ್ನು ಖಾತೆ ಅದಲು-ಬದಲು ಆಗುವ ಬಗ್ಗೆ ಸೋಮವಾರ ಬೆಳಗ್ಗೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಮಾಧುಸ್ವಾಮಿಯ ಆಕ್ರೋಶ ಶಮನಕ್ಕೆ ಯತ್ನಿಸಿದ್ದ ಸಿಎಂ, ಪ್ರವಾಸೋದ್ಯಮದ ಜತೆಗೆ ಪರಿಸರ ವಿಜ್ಞಾನ ಖಾತೆಯನ್ನೂ ಕೊಟ್ಟಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.