ರಾಜ್ಯದ ಎಲ್ಲಾ ಮಕ್ಕಳಿಗೆ ಬಿಸಿಯೂಟ ದೊಂದಿಗೆ ಸಿಗಲಿದೆ ಮೊಟ್ಟೆ – ರಾಜ್ಯಾದ್ಯಂತ ವಿಸ್ತರಣೆ ಮಾಡಿದ ಇಲಾಖೆ…..

Suddi Sante Desk

ಬೆಂಗಳೂರು

ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ಯೊಂದನ್ನು ಪ್ರಕಟಿಸಿದೆ ಹೌದು ಕೇವಲ ಕಲ್ಯಾಣ ಕರ್ನಾ ಟಕಕ್ಕೆ ಸೀಮಿತವಾಗಿದ್ದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ, ಇದೀಗ ಇಡೀ ರಾಜ್ಯದ 1-8 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರಸ್ತುತ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡಲಾಗುತ್ತಿತ್ತು ಆದರೆ ಇದೀಗ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ಶಾಲೆ ಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.

ಈ ಯೋಜನೆಯಿಂದ ಸರ್ಕಾರಕ್ಕೆ 350 ಕೋಟಿ ವೆಚ್ಚ ಹೌದು ಇದಕ್ಕೂ ಮೊದಲು ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮಕ್ಕಳಿಗೆ ವರ್ಷದಲ್ಲಿ 100 ದಿನಗಳು ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ವಿತರಿಸಲು ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಅರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿತ್ತು.ಆದ್ರೆ 100 ದಿನಗಳ ಬದಲು 46 ದಿನಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿ ಸಿದೆ.ಇನ್ನು ಈ ಯೋಜನೆಗೆ ಒಟ್ಟು 350ಕೋಟಿ ವೆಚ್ಚ ಆಗಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.